ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಆರಂಭದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
ಪ್ರತಿಷ್ಟಿತ ಕಣವಾಗಿದ್ದ ನಂದಿಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಿನ್ನಡೆ ಅನುಭವಿಸಿದ್ದು, ಬಿಜೆಪಿ ಅಭ್ಯರ್ಥಿ
ಸುವೇಂದು ಅಧಿಕಾರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಆರಂಭ ಚುನಾವಣಾ ಫಲಿತಾಂಶ ಕುರಿತಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್
ವಿಜಯ್ ವರ್ಗೀಯಾ, ಇನ್ನೂ ಅನೇಕ ಸುತ್ತುಗಳು ಇರುವುದರಿಂದ ಆರಂಭದಲ್ಲಿ ಏನನ್ನೂ ಹೇಳಲಾಗದು. ಸಂಜೆಯೊಳಗೆ
ಸ್ಪಷ್ಟತೆ ಸಿಗಲಿದೆ. ನಾವು ಮೂರನೇ ಸುತ್ತಿನಿಂದ ಟಿಎಂಸಿಗೆ ಪ್ರಬಲ ಪೈಪೋಟಿ ನೀಡಲು ಶುರು ಮಾಡಿದ್ದೇವೆ. ಸಂಜೆಯೊಳಗೆ
ಮ್ಯಾಜಿಕ್ ನಂಬರ್ ದಾಟಲಿದ್ದೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Advertisement