ಲಖನೌ: ಉತ್ತರ ಪ್ರದೇಶದಲ್ಲಿ ವಾರಾಂತ್ಯ ಕರ್ಫ್ಯೂ ಇನ್ನೂ ಎರಡು ದಿನ ವಿಸ್ತರಣೆಯಾಗಿದೆ. ಸದ್ಯ ಇದು ಗುರುವಾರ ಬೆಳಗ್ಗೆ 7 ಗಂಟೆಗೆ ಕೊನೆಗೊಳ್ಳಲಿದೆ.
ಕಳೆದ ಶುಕ್ರವಾರ ರಾತ್ರಿ 8 ಗಂಟೆಗೆ ಆರಂಭವಾಗಿದ್ದ ಕರ್ಫ್ಯೂ ನಾಳೆ ಬೆಳಿಗ್ಗೆ ಕೊನೆಗೊಳ್ಳಬೇಕಿತ್ತು. ಆದರೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸೂಚನೆಯಂತೆ ಗುರುವಾರ ಬೆಳಿಗ್ಗೆ ಕೊನೆಗೊಳ್ಳಲಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ರಾಜ್ಯದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳು ಮತ್ತು ಸಾವುಗಳು ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕ ಸರಪಳಿ ಮುರಿಯುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.
Advertisement