ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿದ್ದು ಜಾರಿ ನಿರ್ದೇಶನಾಲಯ (ಇಡಿ) ಕೇಸು ದಾಖಲಿಸಿದೆ.
ಸಿಬಿಐ ಸಲ್ಲಿಸಿದ ಎಫ್ಐಆರ್ ಆಧಾರದ ಮೇಲೆ ಈ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಮತ್ತು ‘ಅಪರಿಚಿತ ಇತರರು’ ತಮ್ಮ ಅಧಿಕೃತ ಸ್ಥಾನವನ್ನು ಅನಗತ್ಯ ಲಾಭ ಪಡೆಯಲು ಬಳಸಿಕೊಂಡಿದ್ದಾರೆ ಎಂದು ಸಿಬಿಐ ಹೇಳಿದೆ.
ಇದರ ಜೊತೆಗೆ ಮುಂಬೈ ಪೊಲೀಸರ ವರ್ಗಾವಣೆ ಮತ್ತು ನೇಮಕಾತಿ ಮೇಲೆ ಪ್ರಭಾವ ಬೀರಿದೆ ಎಂದು ಮಾಜಿ ನಗರ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಆರೋಪಿಸಿದ್ದಾರೆ. ಸಿಬಿಐ ಪ್ರಕರಣದ ಹಣಕಾಸಿನ ಅಂಶಗಳನ್ನು ಇಡಿ ಪರಿಶೀಲನೆ ನಡೆಸುತ್ತಿತ್ತು.
ಅನಿಲ್ ದೇಶ್ಮುಖ್ ಅವರು ಮಹಾರಾಷ್ಟ್ರ ಗೃಹ ಸಚಿವರಾಗಿದ್ದಾಗ ಆಗಿನ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಸಚಿನ್ ವಾಜೆ ಅವರನ್ನು ಮುಂಬೈನ ಹೋಟೆಲ್, ಬಾರ್ಗಳು ಮತ್ತು ರೆಸ್ಟೋರೆಂಟ್ಗಳಿಂದ ಪ್ರತಿ ತಿಂಗಳು 100 ಕೋಟಿ ರು. ಸಂಗ್ರಹಿಸುವಂತೆ ಕೇಳಿಕೊಂಡಿದ್ದಾರೆ ಎಂದು ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಆರೋಪಿಸಿದ್ದರು.
Advertisement