ನವದೆಹಲಿ: ದೆಹಲಿ ಘಟಕದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ನಿಂದ ದೆಹಲಿಯಲ್ಲಿ ಸೃಜನಶೀಲ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿ, ಗುರುಗಾಂವ್ ಹಾಗೂ ಭಿವಾಡಿಯ ಮಕ್ಕಳಲ್ಲಿ ಕನ್ನಡ ಭಾಷಾಭಿಮಾನ ಮತ್ತು ಸಾಹಿತ್ಯಾಭಿರುಚಿ ಬೆಳೆಸುವ ಉದ್ದೇಶದಿಂದ ಕಾರ್ಯಗಾರಕ್ಕೆ ಚಾಲನೆ ನೀಡಲಾಗಿದ್ದು ಮೇ.31 ರಿಂದ ಜೂ.04 ವರೆಗೆ ನಡೆಯಲಿದೆ.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ನ ರಾಜ್ಯಾಧ್ಯಕ್ಷರಾದ ಚ.ನಾ. ಅಶೋಕ ಕಾರ್ಯಕ್ರಮವನ್ನು ಅಂತರ್ಜಾಲದ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಖ್ಯಾತ ನಟ ಹಿರಿಯ ರಂಗಕರ್ಮಿ, ಮಂಡ್ಯ ರಮೇಶ್, ನಿರೂಪಕ, ಗಾಯಕರಾದ ಶೈನ್ ಶೆಟ್ಟಿ ಅವರು ಭಾಗವಹಿಸಿದ್ದರು, ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ವಸಂತ ಶೆಟ್ಟಿ ಬೆಳ್ಳಾರೆ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಬಾಲ ಪ್ರತಿಭೆಗಳ ಪ್ರದರ್ಶನವಿರಲಿರುವ ಈ ಕಾರ್ಯಕ್ರಮದಲ್ಲಿ ಬರವಣಿಗೆ ಕೌಶಲ, ಭಾಷಾ ಆಟಗಳು, ಗೀತೆ ಗಾಯನ, ಚಿತ್ರಕಲೆ ಅಭಿನಯ ಕಲೆ ವಿಷಯಾಧಾರಿತವಾಗಿ 5 ದಿನಗಳ ಕಾಲ 5 ರಿಂದ 6:30 ವರೆಗೆ ಪ್ರತಿ ದಿನ ನಡೆಯುವ ಕಾರ್ಯಕ್ರಮದಲ್ಲಿ ಆಸಕ್ತ ಮಕ್ಕಳು ಭಾಗವಹಿಸಬಹುದಾಗಿದೆ.
Advertisement