ಛತ್ತೀಸ್‌ಗಡ: ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರ ಹತ್ಯೆ

ಛತ್ತೀಸ್‌ಗಡದ ಕಟೆಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ವಾಲ್ ಮತ್ತು ಕುಂಜೇರಸ್ ನಡುವಿನ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರ ಹತ್ಯೆಯಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ದಾಂತೇವಾಡ: ಛತ್ತೀಸ್‌ಗಡದ ಕಟೆಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯ ಅದ್ವಾಲ್ ಮತ್ತು ಕುಂಜೇರಸ್ ನಡುವಿನ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳಾ ನಕ್ಸಲರ ಹತ್ಯೆಯಾಗಿದೆ. 

ಇವರೆಲ್ಲರಿಗೂ ತಲಾ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ದಾಂತೇವಾಡ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಭಿಷೇಕ್ ಪಲ್ಲವ್ ಮಾಹಿತಿ ನೀಡಿದ್ದಾರೆ.

ಭಾನುವಾರ ಸಂಜೆ ದಾಂತೇವಾಡದ ಅದ್ವಾಲ್ ಮತ್ತು ಕುಂಜರ ಜಂಗಲ್ಸ್‌ನಲ್ಲಿ ನಕ್ಸಲರೊಂದಿಗೆ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಸಿಬ್ಬಂದಿ ಎನ್‌ಕೌಂಟರ್ ನಡೆಸಿರುವುದಾಗಿ ಎಸ್‌ಪಿ ಅಭಿಷೇಕ್ ಪಲ್ಲವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಎರಡೂ ಕಡೆಯವರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಎನ್‌ಕೌಂಟರ್ ಮುಗಿದ ನಂತರ, ಕಾಡಿನಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಯಿತು.

ಶೋಧ ಕಾರ್ಯಾಚರಣೆ ವೇಳೆ ಮೂವರು ಮಹಿಳಾ ನಕ್ಸಲೀಯರ ಶವಗಳನ್ನು ಯೋಧರು ವಶಪಡಿಸಿಕೊಂಡಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ. ಡಿಆರ್‌ಜಿ ಎನ್‌ಕೌಂಟರ್‌ನಲ್ಲಿ ಹತರಾದ ಮೂವರು ಮಹಿಳಾ ನಕ್ಸಲೀಯರಿಗೆ ತಲಾ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಅವರು ಹೇಳಿದರು.

ಎನ್‌ಕೌಂಟರ್ ಸ್ಥಳದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳಲ್ಲದೆ, ಸುಧಾರಿತ ಸ್ಫೋಟಕ ಸಾಧನಗಳು(ಐಇಡಿಗಳು), ಔಷಧಗಳು ಮತ್ತು ನಕ್ಸಲೀಯ ಸಾಹಿತ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಅಭಿಷೇಕ್ ಪಲ್ಲವ್ ಹೇಳಿದ್ದಾರೆ.

ಛತ್ತೀಸ್ ಗಢದ ಅರಣ್ಯಗಳಲ್ಲಿ ನಕ್ಸಲೀಯರು ಸಕ್ರಿಯವಾಗಿರುವುದು ಗಮನಾರ್ಹ. ಅವರ ಚಟುವಟಿಕೆಗಳು ಕಡಿಮೆಯಾಗಿವೆ ಆದರೆ ಕೊನೆಗೊಂಡಿಲ್ಲ. ಆದ್ದರಿಂದ, ಭದ್ರತಾ ಪಡೆಗಳ ಯೋಧರೊಂದಿಗೆ, ಛತ್ತೀಸ್‌ಗಢದ ಪೊಲೀಸರು ಮತ್ತು ಡಿಆರ್‌ಜಿ ಅರಣ್ಯಗಳಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com