ಪವಿತ್ರ ಯಾತ್ರಾಸ್ಥಳಗಳಿಗೆ ಭೇಟಿ ನೀಡುವಂತೆ ಭಾರತೀಯರಿಗೆ ಮೋದಿ ಕರೆ

ಕೆಲವು ಅನುಭವಗಳು ತುಂಬಾ ಅಲೌಕಿಕವಾಗಿರುತ್ತವೆ, ಅವುಗಳನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದಾರೆ. ಅದಕ್ಕಾಗಿ ಯಾತ್ರಾಸ್ಥಳಗಳಿಗೆ ಜನರು ಭೇಟಿ ನೀಡಬೇಕಾಗಿ ಕರೆ ನೀಡಿದರು.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಕೇದಾರನಾಥ: ಭಾರತದ ಸತ್ವವನ್ನು ತಿಳಿದುಕೊಳ್ಳಲು ಯಾತ್ರಾ ಸ್ಥಳಗಳಿಗೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದೇಶವಾಸಿಗಳಿಗೆ ಸಲಹೆ ನೀಡಿದ್ದಾರೆ.

ಕೇದಾರನಾಥ ದೇವಾಲಯದಲ್ಲಿ ಹಲವಾರು ಯೋಜನೆಗಳನ್ನು ಉದ್ಘಾಟಿಸಿ ಮತ್ತು ಇತರರಿಗೆ ಅಡಿಪಾಯ ಹಾಕಿದ ನಂತರ ಸಭೆಯನ್ನುದ್ದೇಶಿಸಿ ಪ್ರಧಾನಿ ಮಾತನಾಡಿದರು.

ಕೆಲವು ಅನುಭವಗಳು ತುಂಬಾ ಅಲೌಕಿಕವಾಗಿರುತ್ತವೆ, ಅವುಗಳನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ, ಅದು ಅನಂತವಾಗಿದೆ, ಬಾಬಾ ಕೇದಾರನಾಥ ಧಾಮದಲ್ಲಿ ನನಗೆ ಹೀಗೆ ಅನಿಸುತ್ತದೆ. ಭಾರತದ ವೈಭವಯುತ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ಸ್ಥಳಗಳು ಮತ್ತು ಧಾರ್ಮಿಕ ಯಾತ್ರಾ ಸ್ಥಳಗಳಿಗೆ ಭೇಟಿ ನೀಡುವಂತೆ ನಾನು ದೇಶವಾಸಿಗಳಿಗೆ ಮನವಿ ಮಾಡುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com