ಬಿಜೆಪಿ ರಾಷ್ಟ್ರೀಯ ಸಭೆಯಲ್ಲಿ ಮೋದಿ ಪ್ರವಾಸದ ಚರ್ಚೆ: ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ರಣಕಹಳೆ
ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಂಚರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ಕುರಿತು ಚರ್ಚೆ, ಮಾರ್ಗಸೂಚಿ ರೂಪಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರಾಜ್ಯಗಳ ಭೇಟಿ ತೀವ್ರಗೊಳ್ಳಲಿದೆ.
Published: 07th November 2021 03:29 PM | Last Updated: 07th November 2021 03:37 PM | A+A A-

ಮೋದಿ ಸಂಗ್ರಹ ಫೋಟೊ
ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ವಿಧಾನಸಭೆ ಚುನಾವಣೆಯ ರಣಕಹಳೆ ಊದಿದ್ದು, ಪ್ರಧಾನಿ ಮೋದಿ ಬ್ಯಾಕ್ ಟು ಬ್ಯಾಕ್ ಪ್ರವಾಸ ಮಾಡಲಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗುತ್ತಿದ್ದಂತೆಯೇ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ರಣಕಹಳೆ ಮೊಳಗಿಸಿದೆ.
ಇದನ್ನೂ ಓದಿ: ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಮತ್ತೆ ಹೊರಹೊಮ್ಮಿದ ಮೋದಿ: ಅಮೆರಿಕ ಸಂಸ್ಥೆ ಸಮೀಕ್ಷೆಯಲ್ಲಿ ಸಾಬೀತು
ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಂಚರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ಕುರಿತು ಚರ್ಚೆ, ಮಾರ್ಗಸೂಚಿ ರೂಪಿಸಲಾಗುತ್ತಿದ್ದು, ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರಾಜ್ಯಗಳ ಭೇಟಿ ತೀವ್ರಗೊಳ್ಳಲಿದೆ.
BJP National Executive Committee meeting has been inaugurated by PM Modi and party president JP Nadda. All participants at the meeting were registered digitally. Around 342 people are taking part in this meeting today: Union minister & BJP leader Dharmendra Pradhan pic.twitter.com/qhgssxHLXD
— ANI (@ANI) November 7, 2021
ಇದನ್ನೂ ಓದಿ: ಕೇದಾರನಾಥ ದೇವಸ್ಥಾನ ಆವರಣದಲ್ಲಿ ಶೂ ಧರಿಸಿದ ಮೋದಿ: ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಕಿತ್ತಾಟ
ಇನ್ನು ಉತ್ತರ ಪ್ರದೇಶಕ್ಕೆ ಮುಂದಿನ 15 ದಿನಗಳಲ್ಲಿ ಪ್ರಧಾನಿ ಮೋದಿ 3 ಬಾರಿ ಭೇಟಿ ನೀಡಲಿದ್ದು, ಅಲ್ಲಿ ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದಲ್ಲದೆ, ಗೃಹ ಸಚಿವ ಅಮಿತ್ ಶಾ ಅವರ 2 ಭೇಟಿಗಳನ್ನು ಸಹ ಪ್ರಸ್ತಾಪಿಸಲಾಗಿದೆ.
ಇದನ್ನೂ ಓದಿ: ಕೇದಾರನಾಥ ಪುನರ್ನಿರ್ಮಾಣ: ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಿಷ್ಟು...
ಮುಂದಿನ ದಿನಗಳಲ್ಲಿ ಉತ್ತರ ಪ್ರದೇಶದಲ್ಲಿ ಪ್ರಧಾನಿ ಬಿರುಸಿನ ಪ್ರವಾಸ ಮಾಡಲಿದ್ದಾರೆ. ಚುನಾವಣೆಯ ದೃಷ್ಟಿಯಿಂದ ಇವು ಅತ್ಯಂತ ಮಹತ್ವದ ಪ್ರವಾಸಗಳಾಗಲಿವೆ. ಇವುಗಳಲ್ಲಿ ಪ್ರಧಾನಿ ಸಾರ್ವಜನಿಕ ಸಭೆಗಳನ್ನೂ ಉದ್ದೇಶಿಸಿ ಮಾತನಾಡಲಿದ್ದಾರೆ. ನವೆಂಬರ್ 19 ರಂದು ಪ್ರಧಾನಿ ಮೋದಿ ಝಾನ್ಸಿಗೆ ಭೇಟಿ ನೀಡಲಿದ್ದಾರೆ. ಝಾನ್ಸಿಯ ಕೋಟೆಯಲ್ಲಿ ಸ್ವಾತಂತ್ರ್ಯದ 75ನೇ ವರ್ಷಾಚರಣೆಯ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಝಾನ್ಸಿ ಪ್ರವಾಸದಲ್ಲಿ ಬುಂದೇಲ್ಖಂಡ್ಗೆ ಪ್ರಧಾನಿ ಅನೇಕ ಉಡುಗೊರೆಗಳನ್ನು ನೀಡಲಿದ್ದಾರೆ.
ಇದನ್ನೂ ಓದಿ: ಕೇದಾರನಾಥದಲ್ಲಿ ರೂ.130 ಕೋಟಿ ಮೌಲ್ಯದ ಯೋಜನೆಗಳ ಉದ್ಘಾಟಿಸಿದ ಪ್ರಧಾನಿ ಮೋದಿ