ಶ್ರೀನಗರದಲ್ಲಿ ಉಗ್ರರಿಂದ ಪೊಲೀಸ್ ಪೇದೆ ಹತ್ಯೆ

ಕಾಶ್ಮೀರದಲ್ಲಿ ಭಯೋತ್ಪಾದಕರು ಪೊಲೀಸ್ ಪೇದೆಯನ್ನು ಹತ್ಯೆ ಮಾಡಿರುವ ಘಟನೆ ಭಾನುವಾರ ವರದಿಯಾಗಿದೆ.
ಭಯೋತ್ಪಾದಕರು
ಭಯೋತ್ಪಾದಕರು

ಶ್ರೀನಗರ: ಕಾಶ್ಮೀರದಲ್ಲಿ ಭಯೋತ್ಪಾದಕರು ಪೊಲೀಸ್ ಪೇದೆಯನ್ನು ಹತ್ಯೆ ಮಾಡಿರುವ ಘಟನೆ ಭಾನುವಾರ ವರದಿಯಾಗಿದೆ.

ಬತಾಮಲೂ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ಪೊಲೀಸ್ ಪೇದೆಯನ್ನು ತೌಸೀಫ್ ಅಹ್ಮದ್ ಎಂದು ಗುರುತಿಸಲಾಗಿದೆ. "ರಾತ್ರಿ 8 ಗಂಟೆ ವೇಳೆಗೆ ಭಯೋತ್ಪಾದಕರು ಜೆಕೆಪಿ ಪೇದೆ ತೌಸೀಫ್ ಅಹ್ಮದ್ ಮೇಲೆ ಆತನ ನಿವಾಸದ ಬಳಿ ಗುಂಡಿನ ದಾಳಿ ನಡೆಸಿದ್ದಾರೆ" ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಎಸ್ಎಂಹೆಚ್ಎಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆಗೆ ಆಗಲೇ ಪೊಲೀಸ್ ಪೇದೆ ಸಾವನ್ನಪ್ಪಿದ್ದರು.

ಉಗ್ರರಿಗಾಗಿ ಆ ಪ್ರದೇಶದಲ್ಲಿ ಶೋಧಕಾರ್ಯಾಚರಣೆ ನಡೆಯುತ್ತಿದೆ. ಇದೇ ವೇಳೆ ಎನ್ ಸಿ ಈ ದಾಳಿಯನ್ನು ಖಂಡಿಸಿದೆ. 29 ವರ್ಷದ ಪೊಲೀಸ್ ಪೇದೆಯ ಮೇಲೆ ನಡೆದಿರುವ ದಾಳಿಯನ್ನು ಖಂಡಿಸುವುದಾಗಿ ತಿಳಿಸಿದೆ. ಮೃತ ಪೊಲೀಸ್ ಪೇದೆಗೆ ಅಲ್ಲಾ ಜನ್ನತ್ ಕರುಣಿಸಲಿ ಎಂದು ಎನ್ ಸಿ ಸಂತಾಪ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com