social_icon

ದೆಹಲಿ ವಾಯುಮಾಲಿನ್ಯ: ಸರ್ಕಾರಿ ನೌಕರರ 'ವರ್ಕ್ ಫ್ರಂ ಹೋಂ' ಗೆ ಕೇಂದ್ರ ವಿರೋಧ, ಕಾರ್‌ಪೂಲಿಂಗ್'ಗೆ ಸಲಹೆ

ಸರ್ಕಾರಿ ನೌಕರರು ಮನೆಯಿಂದ ಕೆಲಸ ಮಾಡಲು ಅನುಮತಿ ನೀಡಲು ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಇದರ ಬದಲಿಗೆ ಕಾರ್ಪೂಲಿಂಗ್ ಅನುಸರಿಸಲು ಸಿಬ್ಬಂದಿಗಳಿಗೆ ಸಲಹೆ ನೀಡಿದೆ ಎಂದು ತಿಳಿದುಬಂದಿದೆ.

Published: 17th November 2021 01:58 PM  |   Last Updated: 17th November 2021 02:21 PM   |  A+A-


File photo

ಸಂಗ್ರಹ ಚಿತ್ರ

Posted By : manjula
Source : The New Indian Express

ನವದೆಹಲಿ: ಸರ್ಕಾರಿ ನೌಕರರು ಮನೆಯಿಂದ ಕೆಲಸ ಮಾಡಲು ಅನುಮತಿ ನೀಡಲು ವಿರೋಧ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಇದರ ಬದಲಿಗೆ ಕಾರ್ಪೂಲಿಂಗ್ ಅನುಸರಿಸಲು ಸಿಬ್ಬಂದಿಗಳಿಗೆ ಸಲಹೆ ನೀಡಿದೆ ಎಂದು ತಿಳಿದುಬಂದಿದೆ.

ದೆಹಲಿ ಹಾಗೂ ನೆರೆಹೊರೆಯ ನಗರಗಳಲ್ಲಿನ ವಾಯು ಮಾಲಿನ್ಯದ ಕುರಿತು ವಿಚಾರಣೆಗೆ ಮುಂಚಿತವಾಗಿ ಸುಪ್ರೀಂಕೋರ್ಟ್'ಗೆ ಕೇಂದ್ರ ಸರ್ಕಾರ ಅವಿಡವಿಟ್ ಸಲ್ಲಿಸಿದೆ.

ಅಫಿಡವಿಟ್ ನಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಹಲವಾರು ಸರ್ಕಾರಿ ಕಾರ್ಯಗಳ ಮೇಲೆ ಗಣನೀಯವಾಗಿ ದೀರ್ಘಾವಧಿಯವರೆಗೆ ಪರಿಣಾಮ ಬೀರಿವೆ. ಇದು ಇಡೀ ದೇಶದ ಮೇಲೆ ಪರಿಣಾಮ ಉಂಟು ಮಾಡಿತು. ಸರ್ಕಾರಿ ನೌಕರರು ಮನೆಯಿಂದ ಕೆಲಸ ಮಾಡುವುದರಿಂದ ಯಾವುದೇ ಪ್ರಯೋಜನ ಹಾಗೂ ಪರಿಣಾಮಕಾರಿಯಾಗುವುದಿಲ್ಲ. ನೌಕರರಿಗೆ ಮನೆಯಿಂದ ಕೆಲಸ ಮಾಡಲು ಅವಕಾಶ ನೀಡುವ ಬದಲು, ಅವರು ಪ್ರಯಾಣಕ್ಕೆ ಬಳಲುವ ವಾಹನಗಳ ಸಂಖ್ಯೆ ಮಾಡಿ, ಕಾರ್ಪೂಲಿಂಗ್ ಅನುಸರಿಸುವುದು ಉತ್ತಮವಾಗಿರುತ್ತದೆ ಎಂದು ಹೇಳಿದೆ.

ದೆಹಲಿ-ಎನ್'ಸಿಆರ್'ನ ವಾಯು ಮಾಲಿನ್ಯ ನಿರ್ವಹಣೆಯ ಆಯುಕ್ತರಿಗೆ ಅಗತ್ಯವಸ್ತುಗಳ ಸಾಗಿಸುವ ಲಾರಿಗಳ ಹೊರತುಪಡಿಸಿ, ಭಾರೀ ಗಾತ್ರದ ಟ್ರಕ್ ಗಳ, ಧರ್ಮಲ್ ಪ್ಲಾಂಟ್, ನಿರ್ಮಾಣ ಕಾರ್ಯಗಳನ್ನು ನವೆಂಬರ್ 21ರವರೆಗೂ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದೆ.

ಈ ನಡುವೆ ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ತನ್ನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಲಹೆಗಳನ್ನು ನೀಡಿದ್ದು, ಸಂಚಾರಕ್ಕೆ ವಾಹನಗಳನ್ನು ಕಡಿಮೆ ಬಳಕೆ ಮಾಡುವಂತೆ ಹಾಗೂ ಇತರೆ ಸಿಬ್ಬಂದಿಗಳೊಂದಿಗೆ ಹಂಚಿಕೊಳ್ಳುವಂತೆ ಸಲಹೆ ನೀಡಿದೆ. ಇದರಿಂದ ಕೇಂದ್ರ ಸರ್ಕಾರದ ವಾಹನಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಲಿದೆ.

ಈ ಹಿಂದೆ ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಪಂಜಾಬ್, ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶಗಳೊಂದಿಗೆ ನವೆಂಬರ್ 16 ರಂದು "ತುರ್ತು ಸಭೆ" ನಡೆಸುವಂತೆ ಹಾಗೂ ಈ ವೇಳೆ ದೆಹಲಿ-ಎನ್‌ಸಿಆರ್‌ನಲ್ಲಿನ ವಾಯುಮಾಲಿನ್ಯವನ್ನು ತಡೆಯಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಸೂಚಿಸಿತ್ತು. ಅಲ್ಲದೆ, ಉದ್ಯೋಗಿಗಳಿಗೆ ಕನಿಷ್ಠ ಒಂದು ವಾರದವರೆಗೆ ಮನೆಯಿಂದ ಕೆಲಸ ಮಾಡಲು ಪರಿಗಣಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿತ್ತು.


Stay up to date on all the latest ದೇಶ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp