
ತಮಿಳು ನಟ ವಿಜಯ್
ಚೆನ್ನೈ: ಸ್ಥಳೀಯ ಚುನಾವಣೆಗಳು ಹತ್ತಿರದಲ್ಲಿರುವಾಗಲೇ ತಮಿಳು ನಾಯಕ ನಟ ವಿಜಯ್ ಅಭಿಮಾನಿಗಳು ಫಲಕಗಳನ್ನು ಹಿಡಿದು ಮತದಾರರ ಹಕ್ಕುಗಳ ಕುರಿತಾದ ಜಾಗೃತಿ ಅಭಿಯಾನದಲ್ಲಿ ತೊಡಗಿಕೊಂಡಿದ್ದಾರೆ.
ಇದನ್ನೂ ಓದಿ: ತಂದೆ-ತಾಯಿ ವಿರುದ್ಧವೇ ದೂರು ದಾಖಲಿಸಿದ ತಮಿಳು ನಟ ವಿಜಯ್!
ರಾಜಕೀಯದಲ್ಲಿ ತಮ್ಮ ಅದೃಷ್ಟಪರೀಕ್ಷೆ ನಡೆಸಲು ವಿಜಯ್ ಆಸಕ್ತಿ ಹೊಂದಿದ್ದು ಅದಕ್ಕೆ ಪೂರ್ವಭಾವಿ ತಯಾರಿಯಲ್ಲಿ ತೊಡಗಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ: ವಿಜಯ್ ಸೇತುಪತಿ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ: ಹಿಂದೂ ಸಂಘಟನೆ ಮುಖಂಡನ ವಿರುದ್ಧ ದೂರು
ವಿಜಯ್ ಅಭಿಮಾನಿಗಳು ಮುಖ್ಯವಾಗಿ ಯುವಪೀಳಿಗೆಯನ್ನು ಕೇಂದ್ರೀಕರಿಸಿ ಜಾಗೃತಿ ಅಭಿಯಾನ ಹಮ್ಮಿಕೊಂಡಿರುವುದು ವಿಶೇಷವಾಗಿದೆ. ಭಿತ್ತಿ ಪೋಸ್ಟರ್ ಗಳು ಮಾತ್ರವಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿಯೂ ವಿಜಯ್ ಅಭಿಮಾನಿಗಳು ಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದಾರೆ.
ಇದನ್ನೂ ಓದಿ: ಬಿಗ್ ಬಾಸ್ ನಿರೂಪಕರ ಬದಲಾವಣೆ: ಕಮಲ್ ಹಾಸನ್ ಬದಲು ನಟಿ ರಮ್ಯಾ ಕೃಷ್ಣ