ಓಮಿಕ್ರಾನ್ ಸೋಂಕಿತರಿಗೆ ಪ್ರತ್ಯೇಕ ಆಸ್ಪತ್ರೆ ನಿಗದಪಡಿಸಿದ ದೆಹಲಿ ಸರ್ಕಾರ

ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ದೆಹಲಿ ಆರೋಗ್ಯ ಇಲಾಖೆಯು ಲೋಕನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಯನ್ನು ಮೀಸಲಾಗಿಟ್ಟಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್‌ ಸೋಂಕಿತರಿಗೆ ಚಿಕಿತ್ಸೆ ನೀಡಲು ದೆಹಲಿ ಆರೋಗ್ಯ ಇಲಾಖೆಯು ಲೋಕನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಯನ್ನು ಮೀಸಲಾಗಿಟ್ಟಿದೆ.

ಓಮಿಕ್ರಾನ್ ಸೋಂಕಿತ ರೋಗಿಗಳನ್ನು ಪ್ರತ್ಯೇಕಿಸಲು ಮತ್ತು ಚಿಕಿತ್ಸೆ ನೀಡಲು ಪ್ರತೇಕ ವಾರ್ಡ್‌ಗಳನ್ನು ನಿಗದಿಪಡಿಸಲು ಆಸ್ಪತ್ರೆಗೆ ಸೂಚಿಸಲಾಗಿದೆ. 

ಹೊಸ ರೂಪಾಂತರಿ ವೈರಸ್ ತಗುಲಿದ ಯಾವುದೇ ರೋಗಿಗೆ ಯಾವುದೇ ಕಾರಣಕ್ಕೂ ಪ್ರವೇಶ ನಿರಾಕರಿಸಲಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ.

ಹೊಸ ರೂಪಾಂತರಿ ವೈರಸ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ (WHO) ತೀವ್ರ 'ಕಳವಳ' ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ  ಕೇಂದ್ರ ಸರ್ಕಾರ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಭಾನುವಾರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.

ಮಾರ್ಗಸೂಚಿಗಳ ಪ್ರಕಾರ, ಓಮಿಕ್ರಾನ್ ಪಾಸಿಟಿವ್ ದೃಢಪಡುವ ರೋಗಿಗಳಿಗೆ ಪ್ರತ್ಯೇಕ ಘಟಕವನ್ನು ಸ್ಥಾಪಿಸಬೇಕು ಎಂದು ಹೇಳಿದೆ. ಅದರ ಪ್ರಕಾರ ದೆಹಲಿ ಸರ್ಕಾರ ಲೋಕನಾಯಕ ಆಸ್ಪತ್ರೆಯನ್ನು ಹೊಸ ರೂಪಾಂತರಿ ಸೋಂಕಿತರಿಗಾಗಿ ನಿಗದಿಪಡಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com