ಪಕ್ಷದಲ್ಲಿ ಅಮರೀಂದರ್ ಸಿಂಗ್ ಗೆ ಅಪಮಾನ ವರದಿಗಳಲ್ಲಿ ಸತ್ಯಾಂಶವಿಲ್ಲ: ಕಾಂಗ್ರೆಸ್

ಕಾಂಗ್ರೆಸ್ ನಿಂದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಅವಮಾನಿಸಲಾಗಿದೆ ಎಂಬ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಪಂಜಾಬ್ ಎಐಸಿಸಿ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ.
ಕ್ಯಾಪ್ಟನ್ ಅಮರೀಂದರ್ ಸಿಂಗ್, ಹರೀಶ್ ರಾವತ್
ಕ್ಯಾಪ್ಟನ್ ಅಮರೀಂದರ್ ಸಿಂಗ್, ಹರೀಶ್ ರಾವತ್
Updated on

ಡೆಹ್ರಡೂನ್: ಕಾಂಗ್ರೆಸ್ ನಿಂದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಅವಮಾನಿಸಲಾಗಿದೆ ಎಂಬ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಪಂಜಾಬ್ ಎಐಸಿಸಿ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ತೊರೆಯುತ್ತಿರುವುದಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ನಿನ್ನೆ ಹೇಳಿಕೆ ನೀಡಿದ್ದರು. ಈ ಕುರಿತಂತೆ ಪ್ರತಿಕ್ರಿಯಿಸಿರುವ ಹರೀಶ್ ರಾವತ್,  ಅಮರೀಂದರ್ ಸಿಂಗ್ ಅವರನ್ನು ಅಪಮಾನಿಸಲಾಗಿದೆ ಎಂಬುದು ಸಂಪೂರ್ಣ ತಪ್ಪು, ಅವರು ಅಮಿತ್ ಶಾ ಮತ್ತಿತರ ಬಿಜೆಪಿ ಮುಖಂಡರನ್ನು ಭೇಟಿಯಾಗಿರುವುದು ಅವರ ಜಾತ್ಯಾತೀತ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡಿದೆ ಎಂದಿದ್ದಾರೆ.

ಅಕಾಲಿ ದಳ ಸರ್ಕಾರದ ಅವಧಿಯಲ್ಲಿ ಸಂಭವಿಸಿದ ಹತ್ಯಾಕಾಂಡ ಸಂಬಂಧ ಯಾವುದೇ ಕ್ರಮ ತೆಗೆದುಕೊಳ್ಳದಿದ್ದರಿಂದ ಅಮರೀಂದರ್ ಸಿಂಗ್ ವಿರುದ್ಧ ಪಂಜಾಬ್ ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದರು.  ಕಾಂಗ್ರೆಸ್ ಪಕ್ಷ ಈವರೆಗೂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಗೌರವ ಮತ್ತು ಘನತೆಯನ್ನು ರಕ್ಷಿಸುವ ಕೆಲಸ ಮಾಡಿದೆ.  ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ಹೆಚ್ಚಿಸುವ ಕೆಲಸ ಮಾಡಿರುವುದಾಗಿ ರಾವತ್ ತಿಳಿಸಿದ್ದಾರೆ.

ಪಂಜಾಬಿನಲ್ಲಿ ಚುನಾವಣೆಗೆ ಕೆಲ ತಿಂಗಳು ಬಾಕಿಯಿರುವಾಗಲೇ ಅಲ್ಲಿನ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸುವಲ್ಲಿ ವಿಫಲವಾಗಿರುವುದಕ್ಕೆ ಕಾಂಗ್ರೆಸ್ ಕೇಂದ್ರಿಯ ನಾಯಕತ್ವ ವಿರುದ್ಧ ಪಕ್ಷ ಹಾಗೂ ಹೊರಗಡೆ ತೀವ್ರ ರೀತಿಯ ಟೀಕೆಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com