ಕೇರಳ: ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ 25 ಸಾವಿರ ಮಂದಿಗೆ ಅವಕಾಶ

ಕೋವಿಡ್ ಸಾಂಕ್ರಾಮಿಕದ ನಡುವೆ, ಮಂಡಲ-ಮಕರವಿಳಕ್ಕು ಉತ್ಸವದ ಸಮಯದಲ್ಲಿ ಶಬರಿಮಲೆಯ ವಿಶ್ವವಿಖ್ಯಾತ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರತಿದಿನ ಕೇವಲ 25 ಸಾವಿರ ಭಕ್ತರು ದರ್ಶನ ಪಡೆಯಲು ಅನುಮತಿಸಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಶಬರಿಮಲೆ
ಶಬರಿಮಲೆ

ತಿರುವನಂತಪುರಂ: ಕೋವಿಡ್ ಸಾಂಕ್ರಾಮಿಕದ ನಡುವೆ, ಮಂಡಲ-ಮಕರವಿಳಕ್ಕು ಉತ್ಸವದ ಸಮಯದಲ್ಲಿ ಶಬರಿಮಲೆಯ ವಿಶ್ವವಿಖ್ಯಾತ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರತಿದಿನ ಕೇವಲ 25 ಸಾವಿರ ಭಕ್ತರು ದರ್ಶನ ಪಡೆಯಲು ಅನುಮತಿಸಲಾಗುವುದು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಅಯ್ಯಪ್ಪ ದರ್ಶನಕ್ಕೆ 10 ವರ್ಷಕ್ಕಿಂತ ಕಡಿಮೆ ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟ ಭಕ್ತರಿಗೆ ಅವಕಾಶ ನೀಡುವ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಆನ್‌ಲೈನ್ 'ವರ್ಚುವಲ್ ಕ್ಯೂ' ವ್ಯವಸ್ಥೆಯ ಮೂಲಕ ಬುಕ್ ಮಾಡಿದ ಭಕ್ತರಿಗೆ ಪ್ರತಿದಿನ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಅವರು ಕೋವಿಡ್ 19 ಲಸಿಕೆ ಪಡೆದುಕೊಂಡಿರುವ ಅಥವಾ ಆರ್‌ಟಿ-ಪಿಸಿಆರ್ ಋಣಾತ್ಮಕ ವರದಿಯ ಎರಡು ಪ್ರಮಾಣಗಳ ಪ್ರಮಾಣಪತ್ರವನ್ನು ಒದಗಿಸಬೇಕು.

ಆದಾಗ್ಯೂ, ಭಕ್ತರು ಏರುಮಲೆ ಮತ್ತು ಪುಲ್ಮೇಡು ಸಾಂಪ್ರದಾಯಿಕ ಅರಣ್ಯ ಮಾರ್ಗಗಳ ಮೂಲಕ ಹೋಗಲು ಅನುಮತಿಸುವುದಿಲ್ಲ.

ಪಂಪಾ ನದಿಯಲ್ಲಿ ಸ್ನಾನ ಮಾಡಲು ಭಕ್ತರಿಗೆ ಅವಕಾಶವಿದೆ. ಕೋವಿಡ್ ನಿರ್ಬಂಧಗಳಿಂದಾಗಿ ಶಬರಿಮಲೆಯ ಸನ್ನಿಧಾನದಲ್ಲಿ ಯಾತ್ರಾರ್ಥಿಗಳಿಗೆ ಉಳಿಯಲು ಅವಕಾಶವಿಲ್ಲ ಎಂದು ಮಾಹಿತಿ ದೊರಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com