ವಾಷಿಂಗ್ಟನ್: ಕಾಶ್ಮೀರ ಕಣಿವೆಯಲ್ಲಿ ನಾಗರಿಕರನ್ನು ಗುರಿಯಾಗಿಸಿ ಉಗ್ರರು ನಡೆಸುತ್ತಿರುವ ದಾಳಿಯನ್ನು ಅಮೆರಿಕದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರು ಖಂಡಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಭಾರತ ಸರ್ಕಾರ ತನ್ನ ನೀತಿಯನ್ನು ಪುನರ್ ಪರಿಶೀಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕಳೆದ ಕೆಲವು ದಿನಗಳಲ್ಲಿ ಕಣಿವೆಯಲ್ಲಿ ಕಾಶ್ಮೀರಿ ಪಂಡಿತ್, ಸಿಖ್ ಮತ್ತು ಮುಸ್ಲಿಂ ಸಮುದಾಯಗಳಿಗೆ ಸೇರಿದ ಏಳು ನಾಗರಿಕರನ್ನು ಕೊಲ್ಲಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಬಂಧಿತರು ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದಿದ್ದರು.
ಈ ವರ್ಷ ಇಲ್ಲಿಯವರೆಗೆ ಕಾಶ್ಮೀರದಲ್ಲಿ ಒಟ್ಟು 29 ನಾಗರಿಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಎಎಫ್ಪಿ ವರದಿ ಮಾಡಿದೆ. ಕಳೆದ 5 ದಿನಗಳಲ್ಲಿ ಉಗ್ರರು ಒಟ್ಟು 7 ಮಂದಿಯನ್ನು ಹತ್ಯೆ ಮಾಡಿದ್ದಾರೆ. ಹತರಾದವರಲ್ಲಿ ನಾಲ್ವರು ಕಾಶ್ಮೀರಿ ಪಂಡಿತರ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ಕಾಶ್ಮೀರದಲ್ಲಿ ಅಲ್ಪಸಂಖ್ಯಾತರಿಗೆ ಸರ್ಕಾರ ರಕ್ಷಣೆ ಕೊಡಬೇಕ್ಲು ಎಂದು ಅಮೆರಿಕದಲ್ಲಿ ನೆಲೆಸಿರುವ ಕಾಶ್ಮೀರಿ ಪಂಡಿತರ ಒಕ್ಕೂಟ (ಕೆಒಎ) ಒತ್ತಾಯಿಸಿದೆ.
ಜಮ್ಮು-ಕಾಶ್ಮೀರದ ಅನಂತ್ ನಾಗ್, ಬಂಡಿಪೊರಾ ಜಿಲ್ಲೆಗಳಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ, ಪೊಲೀಸ್ ಗೆ ಗಾಯ
ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಇಬ್ಬರು ಪೊಲೀಸರಿಗೆ ಗಾಯ
ಜಮ್ಮು-ಕಾಶ್ಮೀರದ ಜನತೆಯನ್ನು ಕಾಪಾಡುವಲ್ಲಿ ಕೇಂದ್ರ ವಿಫಲ: ಕಾಂಗ್ರೆಸ್ ನಾಯಕಿ ರಜನಿ ಪಾಟೀಲ್
ಅಫ್ಘಾನ್ ಪರಿಸ್ಥಿತಿ ಸ್ಥಿರವಾದಲ್ಲಿ ಅಲ್ಲಿನ ಉಗ್ರರಿಂದ ಜಮ್ಮು-ಕಾಶ್ಮೀರ ಪ್ರವೇಶಕ್ಕೆ ಯತ್ನ: ಸೇನಾ ಮುಖ್ಯಸ್ಥ
ಕಾಶ್ಮೀರದಲ್ಲಿ ಪರಿಸ್ಥಿತಿ ಹದಗೆಡಲು ಕೇಂದ್ರ ಸರ್ಕಾರ ಕಾರಣ: ಮಾಜಿ ಸಿಎಂ ಮೆಹಬೂಬಾ ಮುಫ್ತಿ
'ನಮ್ಮ ಕಾಶ್ಮೀರಿ ಸಹೋದರಿಯರು ಮತ್ತು ಸಹೋದರರ ಮೇಲೆ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿ ನೋವಿನ ಸಂಗತಿ'
Advertisement