ಲಖೀಂಪುರ್ ಖೇರಿ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಮೂರು ದಿನ ಪೊಲೀಸ್ ರಿಮಾಂಡ್

ಲಖೀಂಪುರ್ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಹಾಗೂ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಷರತ್ತಿನೊಂದಿಗೆ ಮೂರು ದಿನಗಳ ಪೊಲೀಸ್ ರಿಮಾಂಡ್ ಗೆ ಕಳುಹಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ಎಸ್ ಪಿ ಯಾದವ್ ಸೋಮವಾರ ಹೇಳಿದ್ದಾರೆ.
ಲಖೀಂಪುರ್ ಖೇರಿ ಹಿಂಸಾಚಾರದ ಆರೋಪಿ ಆಶಿಶ್ ಮಿಶ್ರಾ
ಲಖೀಂಪುರ್ ಖೇರಿ ಹಿಂಸಾಚಾರದ ಆರೋಪಿ ಆಶಿಶ್ ಮಿಶ್ರಾ

ಲಖನೌ: ಲಖೀಂಪುರ್ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಹಾಗೂ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಷರತ್ತಿನೊಂದಿಗೆ ಮೂರು ದಿನಗಳ ಪೊಲೀಸ್ ರಿಮಾಂಡ್ ಗೆ ಕಳುಹಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ಎಸ್ ಪಿ ಯಾದವ್ ಸೋಮವಾರ ಹೇಳಿದ್ದಾರೆ.

ಶನಿವಾರ ತಡರಾತ್ರಿ ಆಶಿಶ್ ಮಿಶ್ರಾ ಅವರನ್ನು ಬಂಧಿಸಿದ ನಂತರ ಸ್ಥಳೀಯ ನ್ಯಾಯಾಲಯವೊಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇಂದು  ಆಶಿಶ್  ಪೋಲಿಸ್ ಕಸ್ಟಡಿಗಾಗಿ ರಿಮಾಂಡ್ ಅರ್ಜಿಯ ವಿಚಾರಣೆ  ನಡೆಯಿತು. 

ಲಖೀಂಪುರ್ ಖೇರ್ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರ ಹತ್ಯೆಗೆ ಸಂಬಂಧಿಸಿದಂತೆ ಶನಿವಾರ ಸುಮಾರು 12 ಗಂಟೆಗಳ ಕಾಲ ಆಶಿಶ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಲಖೀಂಪುರ್ ಖೇರಿಯ ಅಪರಾಧ ವಿಭಾಗದ ಕಚೇರಿಯಲ್ಲಿ ವೈದ್ಯಕೀಯ ತಂಡವೊಂದು ಆಶಿಶ್ ಮಿಶ್ರಾ ಅವರನ್ನು ಪರೀಕ್ಷಿಸಿದ ನಂತರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆತನನ್ನು ಕಸ್ಟಡಿಗೆ ನೀಡಿದೆ ಎಂದು ಪ್ರಾಸಿಕ್ಯೂಷನ್ ವಕೀಲ ಯಾದವ್ ತಿಳಿಸಿದ್ದಾರೆ.

ಎಸ್ ಐಟಿ ವಿಚಾರಣೆ ನಡೆಸುವಾಗಲೆಲ್ಲ ಆಶಿಶ್ ಮಿಶ್ರಾ ವೈದ್ಯಕೀಯ ತಪಾಸಣೆ ನಡೆಸಬೇಕು, ವಿಚಾರಣೆ ವೇಳೆಯಲ್ಲಿ ಪೊಲೀಸರು ಕಿರುಕುಳ ನೀಡಬಾರದು, ವಿಚಾರಣೆ ವೇಳೆಯಲ್ಲಿ ವಿಚಾರಣೆಯ ಸಮಯದಲ್ಲಿ ದೂರದಿಂದಲೇ ಆತನನ್ನು ವೀಕ್ಷಿಸಲು ವಕೀಲರಿಗೆ ಅನುಮತಿ ಸೇರಿದಂತೆ ಪೊಲೀಸ್ ರಿಮಾಂಡ್ ಗಾಗಿ ಮೂರು ಷರತ್ತುಗಳನ್ನು ನ್ಯಾಯಾಲಯ ಹಾಕಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com