ಕರ್ವಾಚೌತ್ ಗೆ ಅವಕಾಶ ನೀಡಿ: ಲೆಪ್ಟಿನೆಂಟ್ ಗವರ್ನರ್ ಗೆ ದೆಹಲಿ ಸಿಎಂ ಕೇಜ್ರಿವಾಲ್ ಮನವಿ

ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕರ್ವಾ ಚೌತ್ ಆಚರಿಸಲು ಅವಕಾಶ ನೀಡಬೇಕೆಂದು ಗವರ್ನರ್ ಗೆ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ರ ಬರೆದಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕರ್ವಾ ಚೌತ್ ಆಚರಿಸಲು ಅವಕಾಶ ನೀಡಬೇಕೆಂದು ಗವರ್ನರ್ ಗೆ ಸಿಎಂ ಅರವಿಂದ್ ಕೇಜ್ರಿವಾಲ್ ಪತ್ರ ಬರೆದಿದ್ದಾರೆ.

ಛಾತ್ ಆಚರಣೆಗೆ ಅನುಮತಿ ನೀಡಲು ಆದಷ್ಟು ಬೇಗ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ಸಭೆ ಕರೆಯುವಂತೆ ಅವರು ಬೈಜಾಲ್ ಅವರಿಗೆ ಮನವಿ ಮಾಡಿದ್ದಾರೆ.

ಕೋವಿಡ್ ಸಾಂಕ್ರಾಮಿಕ ಸೋಂಕು ಹೆಚ್ಚಿದ್ದ ಹಿನ್ನೆಲೆಯಲ್ಲಿ ಸೆಪ್ಟಂಬರ್ 30 ರಂದು ಡಿಡಿಎಂಎ ಹೊರಡಿಸಿದ್ದ ಆದೇಶದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ದೇವಾಲಯಗಳಲ್ಲಿ ಆಚರಣೆ ನಡೆಸುವುದನ್ನು ನಿಷೇಧಿಸಿತ್ತು.

ಕಳೆದ ಮೂರು ತಿಂಗಳಿಂದ ದೆಹಲಿಯಲ್ಲಿ ಕೊರೋನಾ ಸೋಂಕು ನಿಯಂತ್ರಣದಲ್ಲಿದ್ದು,ಕರ್ವಾ ಛೌತ್ ಆಚರಣೆಗೆ ಅನುಮತಿ ನೀಡಬೇಕೆಂದು ಕೇಜ್ರಿವಾಲ್ ಮನವಿ ಮಾಡಿದ್ದಾರೆ.  ಉತ್ತರ ಪ್ರದೇಶ, ಹರ್ಯಾಣ, ಮತ್ತು ರಾಜಸ್ತಾನಗಳಲ್ಲಿ ಕೆಲವೇ ಕೆಲವು ನಿರ್ಬಂಧಗಳೊಂದಿಗೆ ಆಚರಣೆ ಮಾಡಲು ಅನುಮತಿ ನೀಡಿದ್ದಾರೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com