ನಾಳೆ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ, ವಿಧಾನಸಭೆ ಚುನಾವಣೆ, ರೈತರ ಪ್ರತಿಭಟನೆ ಕುರಿತು ಚರ್ಚೆ ಸಾಧ್ಯತೆ

ಅಕ್ಟೋಬರ್ 18, 2021 ರ ಸೋಮವಾರದಂದು ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಂದ ಹಿಡಿದು ರೈತರ ಪ್ರತಿಭಟನೆ.......
ಜೆಪಿ ನಡ್ಡಾ
ಜೆಪಿ ನಡ್ಡಾ
Updated on

ನವದೆಹಲಿ: ಅಕ್ಟೋಬರ್ 18, 2021 ರ ಸೋಮವಾರದಂದು ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಿಂದ ಹಿಡಿದು ರೈತರ ಪ್ರತಿಭಟನೆ ಮತ್ತು ಕೋವಿಡ್ -19 ಸಾಂಕ್ರಾಮಿಕದವರೆಗೆ ಹಲವು ಸಮಸ್ಯೆಗಳ ಕುರಿತು ಚರ್ಚಿಸಲಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಸಭೆಯಲ್ಲಿ ಪಕ್ಷದ ವಕ್ತಾರರಲ್ಲದೆ ರಾಷ್ಟ್ರೀಯ ಮಟ್ಟದಲ್ಲಿ ಸಾಂಸ್ಥಿಕ ಜವಾಬ್ದಾರಿಗಳನ್ನು ಹೊಂದಿರುವ ಎಲ್ಲಾ ನಾಯಕರು ಭಾಗವಹಿಸಲಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ, ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಮುಂದಿನ ತಿಂಗಳು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೂ ಮುನ್ನ ಈ ಸಭೆ ನಡೆಯುತ್ತಿರುವುದರಿಂದ ಹೆಚ್ಚು ಮಹತ್ವ ಪಡೆದುಕೊಂಡಿದೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ, ಲಖಿಂಪುರ್ ಖೇರಿಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದಲ್ಲಿ ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಘಟನೆ ಮತ್ತು ರೈತರ ಪ್ರತಿಭಟನಾ ಸ್ಥಳಗಳಲ್ಲಿ ಒಂದಾದ ಸಿಂಘು ಗಡಿಯಲ್ಲಿ ದಲಿತನ ಹತ್ಯೆಯೂ ಚರ್ಚೆಯಲ್ಲಿ ಕಾಣಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com