ಉತ್ತರಪ್ರದೇಶ: ನ್ಯಾಯಾಲಯದಲ್ಲಿ ವಕೀಲರ ಗುಂಡಿಟ್ಟು ಹತ್ಯೆ

ಉತ್ತರಪ್ರದೇಶದ ಶಹಜಹಾನ್ ಪುರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದೊಳಗೆ ವಕೀಲರೊಬ್ಬರಿಗೆ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಸೋಮವಾರ ವರದಿಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಲಖನೌ: ಉತ್ತರಪ್ರದೇಶದ ಶಹಜಹಾನ್ ಪುರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದೊಳಗೆ ವಕೀಲರೊಬ್ಬರಿಗೆ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಸೋಮವಾರ ವರದಿಯಾಗಿದೆ. 

ಹತ್ಯೆಯಾದ ವಕೀಲರನ್ನು ಭೂಪೇಂದ್ರ ಪ್ರತಾಪ್ ಸಿಂಹ ಎಂದು ಗುರ್ತಿಸಲಾಗಿದೆ. ನ್ಯಾಯಾಲಯದ ಮೂರನೇ ಮಹಡಿಯಲ್ಲಿ ವಕೀಲರ ಶವ ಪತ್ತೆಯಾಗಿದೆ. ಮೃತದೇಹದ ಬಳಿ ದೇಶೀಯ ನಿರ್ಮಿತ ಪಿಸ್ತೂಲ್ ಕೂಡ ಕಂಡುಬಂದಿದೆ ಎಂದು ವರದಿಯಾಗಿದೆ.

ಹತ್ಯೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಘಟನೆ ಬಳಿಕ ಸ್ಥಳಕ್ಕಾಗಮಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com