ಮುಂಬೈ: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊ (ಎನ್ ಸಿ ಬಿ) ಅಧಿಕಾರಿಗಳು ಶಾರುಖ್ ಖಾನ್ ಮನೆ ಮೇಲೆ ದಾಳಿ ನಡೆಸಿದ್ದಾರೆ ಎನ್ನುವ ಸುದ್ದಿಗಳು ಮಾಧ್ಯಮಗಳಲ್ಲಿ ಹರಿದಾಡಿದ್ದವು. ಆದರೆ ಎನ್ ಸಿ ಬಿ ಅಧಿಕಾರಿಗಳು ಗುರುವಾರ ಶಾರುಖ್ ಖಾನ್ ಮನೆಗೆ ಭೇಟಿ ನೀಡಿದ್ದು ಪುತ್ರ ಆರ್ಯನ್ ಖಾನ್ ಪ್ರಕರಣ ಸಂಬಂಧದ ಪೇಪರ್ ವರ್ಕ್ ಕೆಲಸಕ್ಕಾಗಿ ಎಂದು ತಿಳಿದುಬಂಡಿದೆ.
ಕ್ರೂಸ್ ಹಡಗಿನಲ್ಲಿ ಮಾದಕ ದ್ರವ್ಯ ಪಾರ್ಟಿ ನಡೆಯುತ್ತಿರುವುದಾಗಿ ಎನ್ ಸಿ ಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಂದರ್ಭ ಅಲ್ಲಿ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಕೂಡಾ ಹಾಜರಿದ್ದರು.ಆಕ್ಟೋಬರ್ 3ರಂದು ಅವರನ್ನು ಎನ್ ಸಿ ಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ಎನ್ ಡಿ ಪಿ ಎಸ್ ವಿಶೇಷ ನ್ಯಾಯಾಲಯ ಆರ್ಯನ್ ಖಾನ್ ಬೇಲ್ ಅರ್ಜಿಯನ್ನು ತಳ್ಳಿಹಾಕಿದೆ. ಆದರೆ ಬಾಂಬೆ ಹೈಕೋರ್ಟಿನಲ್ಲಿ ಆರ್ಯನ್ ಖಾನ್ ಬೇಲ್ ಅರ್ಜಿ ಸಲ್ಲಿಸಿದ್ದು, ಅಕ್ಟೋಬರ್ 26ರಂದು ಅರ್ಜಿ ವಿಚಾರಣೆ ನಡೆಯಲಿದೆ.
Advertisement