ಶಾರುಖ್ ಪುತ್ರ ಆರ್ಯನ್ ಖಾನ್ ಕೇಸ್ ಗೆ 25 ಕೋಟಿ ರೂ. ಟ್ವಿಸ್ಟ್: ಏನಿದು ಎನ್‌ಸಿಬಿ ಮೇಲಿನ ಆರೋಪ?

ಮುಂಬೈನ ಅರ್ಥರ್ ರೋಡ್ ಜೈಲಲ್ಲಿ ಬಂಧಿಯಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ.
ಶಾರುಖ್ ಖಾನ್-ಆರ್ಯನ್ ಖಾನ್
ಶಾರುಖ್ ಖಾನ್-ಆರ್ಯನ್ ಖಾನ್

ಮುಂಬೈ: ಮುಂಬೈನ ಅರ್ಥರ್ ರೋಡ್ ಜೈಲಲ್ಲಿ ಬಂಧಿಯಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. 

ಪ್ರಭಾಕರ್ ಸೈಲ್ ಎಂಬಾತ 25 ಕೋಟಿ ರೂಪಾಯಿ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಲ್ಲದೆ ಎನ್ ಸಿ ಬಿ ಅಧಿಕಾರಿಗಳು ಖಾಲಿ ಪೇಪರ್ ಮೇಲೆ ಸಹಿ ಮಾಡಿಸಿಕೊಂಡಿರುವ ಬಗ್ಗೆಯೂ ಆರೋಪಿಸಿದ್ದಾನೆ.

ಆರ್ಯನ್ ಖಾನ್ ಬಂಧಿಯಾಗಿದ್ದ ಫೋಟೋವೊಂದು ವೈರಲ್ ಆಗಿತ್ತು. ಅದುವೇ ಆರ್ಯನ್ ಖಾನ್ ಜೊತೆಗಿನ ಕಿರಣ್ ಗೋಸಾವಿ ಎಂಬಾತನ ಸೆಲ್ಫಿ ಫೋಟೋ. ಸದ್ಯ ಈ ಕಿರಣ್ ಗೋಸಾವಿ ನಾಪತ್ತೆಯಾಗಿದ್ದಾನೆ. ಈತನ ಬಾಡಿಗಾಡ್ ಆಗಿರುವ ಪ್ರಭಾಕರ್ ಸೈಲ್ ಎಂಬಾತ 25 ಕೋಟಿ ರೂಪಾಯಿ ವಸೂಲಿ ಆರೋಪದ ಬಗ್ಗೆ ಬಾಯ್ಬಿಟ್ಟಿದ್ದಾನೆ.

ಬಾಲಿವುಡ್ ನಟ ಶಾರುಖ್ ಖಾನ್ ಮ್ಯಾನೇಜರ್ ಆಗಿರುವ ಪೂಜಾ ದದ್ಲಾನಿ ಹಾಗೂ ಕಿರಣ್ ಗೋಸಾವಿ ಭೇಟಿಯಾಗಿದ್ದರು. ನೀಲಿ ಬಣ್ಣದ ಮರ್ಸಿಡೀಸ್ ಬೆನ್ಜ್ ಕಾರಿನಲ್ಲಿ 15 ನಿಮಿಷಗಳ ಕಾಲ ಚರ್ಚೆ ನಡೆಸಿದ್ದರು ಎಂಬುದರ ಬಗ್ಗೆ ಪ್ರಭಾಕರ್ ಹೇಳಿಕೊಂಡಿದ್ದಾನೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com