ಪಾಕ್ ಗೆಲುವಿಗೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್‌ಎ ಭಾರತೀಯದಲ್ಲ: ಹರಿಯಾಣ ಆರೋಗ್ಯ ಸಚಿವ ವಿಜ್

ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಗೆದಿದ್ದಕ್ಕೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್ ಎ ಭಾರತೀಯದಾಗಿರಲು ಸಾಧ್ಯವಿಲ್ಲ ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.
ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್
ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್

ನವದೆಹಲಿ: ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಗೆದಿದ್ದಕ್ಕೆ ದೇಶದಲ್ಲಿ ಪಟಾಕಿ ಸಿಡಿಸಿದವರ ಡಿಎನ್ ಎ ಭಾರತೀಯದಾಗಿರಲು ಸಾಧ್ಯವಿಲ್ಲ ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.

ಈ ಕುರಿತಂತೆ ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅನಿಲ್ ವಿಜ್, ನಮ್ಮ ಸ್ವಂತ ಮನೆಯಲ್ಲೂ ದೇಶದ್ರೋಹಿಗಳು ಅಡಗಿರುವುದರ ಬಗ್ಗೆ ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದಿದ್ದಾರೆ. 

ಪಾಕಿಸ್ತಾನ ಗೆದಿದ್ದಕ್ಕಾಗಿ ಕಾಶ್ಮೀರದಲ್ಲಿ ಸಂಭ್ರಮಾಚರಣೆ ಕುರಿತ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ ಹಿರಿಯ ಬಿಜೆಪಿ ಮುಖಂಡ ಅನಿಲ್ ವಿಜ್ ಈ ರೀತಿಯ ಹೇಳಿಕೆ ನೀಡಿದ್ದಾರೆ. 

ದುಬೈನಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ನಲ್ಲಿ ಪಾಕಿಸ್ತಾನ ಭಾರತ ವಿರುದ್ಧ 10 ವಿಕೆಟ್ ಗಳಿಂದ ಗೆಲುವು ಸಾಧಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com