social_icon

ಐಸಿಸಿ ಟಿ20 ವಿಶ್ವಕಪ್: ಪಾಕಿಸ್ತಾನ ಗೆಲುವು ಸಂಭ್ರಮಿಸಿದ್ದ ಶಿಕ್ಷಕಿಯನ್ನು ಹುದ್ದೆಯಿಂದ ಕಿತ್ತೊಗೆದ ಶಾಲೆ!

ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಭಾರತ-ಪಾಕಿಸ್ತಾನದ ಪಂದ್ಯ ಮುಕ್ತಾಯವಾಗಿ 48 ಗಂಟೆಗಳೇ ಕಳೆದರೂ ಆ ಪಂದ್ಯದ ಫಲಿತಾಂಶದ ಬೀರಿರುವ ಪರಿಣಾಮಗಳು ಮಾತ್ರ ಮುಂದುವರೆಯುತ್ತಲೇ ಇದೆ. ಇತ್ತ ಪಾಕಿಸ್ತಾನ ಗೆಲುವನ್ನು ಸಂಭ್ರಮಿಸಿದ ಶಿಕ್ಷಕಿಯೊಬ್ಬರು ಕೆಲಸ ಕಳೆದುಕೊಂಡಿದ್ದಾರೆ.

Published: 27th October 2021 12:54 PM  |   Last Updated: 27th October 2021 03:30 PM   |  A+A-


Virat Kohli-Babar

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ-ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್

Posted By : Srinivasamurthy VN
Source : PTI

ನವದೆಹಲಿ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಭಾರತ-ಪಾಕಿಸ್ತಾನದ ಪಂದ್ಯ ಮುಕ್ತಾಯವಾಗಿ 48 ಗಂಟೆಗಳೇ ಕಳೆದರೂ ಆ ಪಂದ್ಯದ ಫಲಿತಾಂಶದ ಬೀರಿರುವ ಪರಿಣಾಮಗಳು ಮಾತ್ರ ಮುಂದುವರೆಯುತ್ತಲೇ ಇದೆ. ಇತ್ತ ಪಾಕಿಸ್ತಾನ ಗೆಲುವನ್ನು ಸಂಭ್ರಮಿಸಿದ ಶಿಕ್ಷಕಿಯೊಬ್ಬರು ಕೆಲಸ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಸೋಮವಾರಪೇಟೆ: ಭಾರತ- ಪಾಕ್ ಕ್ರಿಕೆಟ್ ಪಂದ್ಯ ವೀಕ್ಷಣೆ ವೇಳೆ ಹೃದಯಾಘಾತದಿಂದ ಕ್ರಿಕೆಟ್ ಪ್ರೇಮಿ ಸಾವು

ರಾಜಸ್ಥಾನದ ಉದಯಪುರದಲ್ಲಿರುವ ನೀರ್ಜಾ ಮೋದಿ ಶಾಲೆಯ ಶಿಕ್ಷಕಿ ನಫೀಸಾ ಅಟ್ಟಾರಿ ಅವರು ಕೆಲಸ ಕಳೆದುಕೊಂಡಿದ್ದಾರೆ. ಭಾರತ-ಪಾಕಿಸ್ತಾನ ಪಂದ್ಯದ ಬಳಿಕ ಶಿಕ್ಷಕಿ ನಫೀಸಾ ಅಟ್ಟಾರಿ ಅವರು, ಪಾಕಿಸ್ತಾನಿ ಕ್ರಿಕೆಟಿಗರ ಚಿತ್ರಗಳೊಂದಿಗೆ "ನಾವು ಗೆದ್ದಿದ್ದೇವೆ" ಎಂಬ ವಾಟ್ಸಾಪ್ ಸ್ಟೇಟಸ್ ಅನ್ನು ಪೋಸ್ಟ್ ಮಾಡಿದ್ದರು. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಶಿಕ್ಷಕಿ ನಫೀಸಾ ಅಟ್ಟಾರಿ ವಿರುದ್ಧ ಭಾರಿ ಟೀಕೆಗಳು ಎದುರಾಗಿತ್ತು. ಇದರಿಂದ ಎಚ್ಚೆತ್ತ ನೀರ್ಜಾ ಮೋದಿ ಶಾಲೆಯ ಆಡಳಿತ ಮಂಡಳಿ  ಶಿಕ್ಷಕಿ ನಫೀಸಾ ಅಟ್ಟಾರಿ ಅವರನ್ನು ಕೆಲಸದಿಂದ ವಜಾ ಮಾಡಿದೆ.

ಇದನ್ನೂ ಓದಿ: ಬಿಸಿಸಿಐನ ಆ ವ್ಯಕ್ತಿಗೆ 'ಬುದ್ದು' ಪ್ರಶಸ್ತಿ ನೀಡಬೇಕು; ಪಾಕ್ ಜೊತೆ ಟೀಂ ಇಂಡಿಯಾ ಆಡಲೇಬಾರದು: ಸುಬ್ರಮಣಿಯನ್ ಸ್ವಾಮಿ

"ನಮ್ಮ ಕುಟುಂಬದ ಸದಸ್ಯರು ಎರಡು ಭಾಗಗಳಾಗಿ ವಿಂಗಡಿಸಲ್ಪಟ್ಟಿದ್ದು, ನಾವು ಎರಡೂ ತಂಡಗಳನ್ನು ಬೆಂಬಲಿಸುತ್ತೇವೆ. ಅದರರ್ಥ ನಾನು ಪಾಕಿಸ್ತಾನವನ್ನು ಬೆಂಬಲಿಸುತ್ತೇನೆ ಎಂದು ಅರ್ಥವಲ್ಲ ಎಂದು ನಫೀಸಾ ಸ್ಪಷ್ಟನೆ ನೀಡಿದ್ದಾರೆ.

ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು
ಇನ್ನು ಪಾಕಿಸ್ತಾನ ತಂಡದ ಗೆಲುವನ್ನು ಸಂಭ್ರಮಿಸಿದ ಶಿಕ್ಷಕಿ ನಫೀಸಾ ವಿರುದ್ಧ ರಾಜಸ್ಥಾನದ ಉದಯಪುರದ ಅಂಬಾ ಮಾತಾ ಪೊಲೀಸ್ ಠಾಣೆಯಲ್ಲಿ ಐಪಿಸಿಯ ಸೆಕ್ಷನ್ 153 ಬಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
 


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp