ಪುನೀತ್ ರಾಜಕುಮಾರನಿಗೆ ವಿಶೇಷವಾಗಿ ಶ್ರದ್ಧಾಂಜಲಿ ಅರ್ಪಿಸಿದ ವೈಎಸ್ ಜಗನ್ ಅಭಿಮಾನಿಗಳು

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲ ದಕ್ಷಿಣ ಭಾರತದಾದ್ಯಂತ ಅಭಿಮಾನಿಗಳು ಇದ್ದಾರೆ. ಇವರ ಅಕಾಲಿಕ ಸಾವಿಗೆ ಶೋಕ ವ್ಯಕ್ತಪಡಿಸಿರುವ ಆಂಧ್ರ ಪ್ರದೇಶದ ಅಭಿಮಾನಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲ ದಕ್ಷಿಣ ಭಾರತದಾದ್ಯಂತ ಅಭಿಮಾನಿಗಳು ಇದ್ದಾರೆ. ಇವರ ಅಕಾಲಿಕ ಸಾವಿಗೆ ಶೋಕ ವ್ಯಕ್ತಪಡಿಸಿರುವ ಆಂಧ್ರ ಪ್ರದೇಶದ ಅಭಿಮಾನಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಅಭಿಮಾನಿಗಳು ವಿಡಿಯೋ ನಿರ್ಮಾಣ ಮಾಡಿದ್ದಾರೆ. ಪುನೀತ್ ಅವರು ಬೇರೆಬೇರೆ ಸಂದರ್ಭಗಳಲ್ಲಿ ಕರ್ನಾಟಕದಾದ್ಯಂತ ಸಂಚರಿಸಿದ್ದರು. ಅವರನ್ನು ಕಾಣಲು ಅಪಾರ ಸಂಖ್ಯೆಯ ಅಭಿಮಾನಿಗಳು ಸೇರಿದ್ದರು. ಇಂಥ ದೃಶ್ಯಗಳನ್ನು ವಿಡಿಯೋದಲ್ಲಿ ಬಳಕೆ ಮಾಡಲಾಗಿದೆ.

ಪುನೀತ್ ಅವರು ಅಶಕ್ತರಿಗೆ, ಅನಾಥರಿಗೆ ನೀಡುತ್ತಿದ್ದ ನೆರವನ್ನು ಹಾಡಿನಲ್ಲಿ ಶ್ಲಾಘಿಸಲಾಗಿದೆ. ಇವರ ಗುಣಗಳನ್ನು ಪ್ರಶಂಸಿಸಲಾಗಿದೆ. ಈಗಾಗಲೇ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com