social_icon

'ಗೋವು ರಾಷ್ಟ್ರೀಯ ಪ್ರಾಣಿಯಾದರೆ ಸಹೋದರತ್ವ ಹೆಚ್ಚುತ್ತದೆ': ಹೈಕೋರ್ಟ್ ಅಭಿಪ್ರಾಯ ಸ್ವಾಗತಿಸಿದ ಮುಸ್ಲಿಮರು

ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯವನ್ನು ಸ್ವಾಗತಿಸಿದ ಮುಸ್ಲಿಂ ಧರ್ಮಗುರುಗಳು, ಇಂತಹ ಕ್ರಮವು ಸಮಾಜದ ವಿವಿಧ ವರ್ಗಗಳ ನಡುವೆ ಸಹೋದರತ್ವ ಹೆಚ್ಚುತ್ತದೆ...

Published: 03rd September 2021 05:17 PM  |   Last Updated: 03rd September 2021 06:13 PM   |  A+A-


Cow

ಸಾಂದರ್ಭಿಕ ಚಿತ್ರ

Posted By : Lingaraj Badiger
Source : The New Indian Express

ಲಖನೌ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯವನ್ನು ಸ್ವಾಗತಿಸಿದ ಮುಸ್ಲಿಂ ಧರ್ಮಗುರುಗಳು, ಇಂತಹ ಕ್ರಮವು ಸಮಾಜದ ವಿವಿಧ ವರ್ಗಗಳ ನಡುವೆ ಸಹೋದರತ್ವ ಹೆಚ್ಚುತ್ತದೆ ಮತ್ತು ಏಕತೆಯನ್ನು ಬಲಪಡಿಸುತ್ತದೆ ಎಂದು ಹೇಳಿದ್ದಾರೆ.

ಹೈಕೋರ್ಟ್ ಅಭಿಪ್ರಾಯ ಸ್ವೀಕರಿಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಸದಸ್ಯರು, ಇಸ್ಲಾಮಿಕ್ ಸೆಂಟರ್ ಆಫ್ ಇಂಡಿಯಾ ಅಧ್ಯಕ್ಷರು ಮತ್ತು ಪ್ರಮುಖ ಸುನ್ನಿ ಧರ್ಮಗುರು ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಾಲಿ ಅವರು, ಹೈಕೋರ್ಟ್ ಅಭಿಪ್ರಾಯ ಜಾರಿಗೆ ತರಬೇಕು ಎಂದು ಹೇಳಿದ್ದಾರೆ.

"ನಾನು ಹೈಕೋರ್ಟ್ ಅಭಿಪ್ರಾಯವನ್ನು ಸ್ವಾಗತಿಸುತ್ತೇನೆ. ನಾವು ಈ ದೇಶದಲ್ಲಿ ಅನೇಕ ವರ್ಷಗಳಿಂದ ಸೌಹಾರ್ದತೆ ಮತ್ತು ಸಹೋದರತ್ವದಿಂದ ಬದುಕುತ್ತಿದ್ದೇವೆ. ಮೊಘಲ್ ದೊರೆ ಬಾಬರ್ ಕೂಡ ತನ್ನ ಉತ್ತರಾಧಿಕಾರಿ ಮತ್ತು ಮಗ ಹುಮಾಯೂನ್ ಅವರನ್ನು ಹಿಂದೂ ಭಾವನೆಗಳನ್ನು ಗೌರವಿಸುವಂತೆ ಮತ್ತು ಗೋಹತ್ಯೆಯನ್ನು ನಿಷೇಧಿಸುವಂತೆ ಹೇಳಿದ್ದರು”ಎಂದು ಮೌಲಾನ ತಿಳಿಸಿದ್ದಾರೆ.

ಇದನ್ನೂ ಓದಿ: ಗೋವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಬೇಕು, ಗೋಮಾಂಸ ಭಕ್ಷಣೆ ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್

ಅದೇ ರೀತಿ, ಆಲ್ ಇಂಡಿಯಾ ಶಿಯಾ ವೈಯಕ್ತಿಕ ಕಾನೂನು ಮಂಡಳಿಯ ಪ್ರಧಾನ ಕಾರ್ಯದರ್ಶಿ ಶಿಯಾ ಧರ್ಮಗುರು ಮೌಲಾನಾ ಯಾಸೂಬ್ ಅಬ್ಬಾಸ್ ಕೂಡ ಈ ಸಲಹೆಯನ್ನು ಬೆಂಬಲಿಸಿದ್ದು, "ಯಾವುದೇ ಪ್ರಾಣಿಯು ನಂಬಿಕೆಯೊಂದಿಗೆ ಸಂಬಂಧ ಹೊಂದಿದ್ದರೆ, ಅವರನ್ನು ನೋಯಿಸಬಾರದು ಎಂದು ನಮಗೆ ಈಗಾಗಲೇ ದೃಢವಾದ ನಂಬಿಕೆ ಇದೆ. ಗೋಹತ್ಯೆಯನ್ನು ನಿಷೇಧಿಸಲಾಗಿದೆ. ಇದು ಇಸ್ಲಾಂ ಮತ್ತು ಭಾರತೀಯ ಸಂಸ್ಕೃತಿಯ ನಿಜವಾದ ಸಂದೇಶವಾಗಿದೆ ಎಂದಿದ್ದಾರೆ.

ಹೈಕೋರ್ಟ್ ಸಲಹೆಯನ್ನು ಶ್ಲಾಘಿಸಿದ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್‌ನ ಮಾಜಿ ಅಧ್ಯಕ್ಷ ವಸೀಮ್ ರಿಜ್ವಿ, ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವುದು ರಾಷ್ಟ್ರಕ್ಕೆ ಗೌರವ ಎಂದಿದ್ದಾರೆ. 

ಗೋವನ್ನು ಕದ್ದು, ಕೊಂದ ಆರೋಪದ ಮೇರೆಗೆ ಬಂಧಿತನಾಗಿದ್ದ ಸಾಂಬಲ್‌ ಜಿಲ್ಲೆಯ ಜಾವೇದ್‌ ನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, 'ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಹಾಗೂ ಗೋ ಹತ್ಯೆ ಮಾಡುವವರನ್ನು ಶಿಕ್ಷಿಸುವ ನಿಟ್ಟಿನಲ್ಲಿ ಸಂಸತ್ತು ಕಾನೂನು ರೂಪಿಸಬೇಕು ಎಂದು ಹೇಳಿತ್ತು.


Stay up to date on all the latest ದೇಶ news
Poll
N R narayana Murty

ಯಾವುದನ್ನೂ ಫ್ರೀಯಾಗಿ ಕೊಡಬಾರದು ಎಂದು ಎನ್ ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.


Result
ಸರಿ
ತಪ್ಪು

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp