ರಾಯ್ಪುರ: ಮತಾಂತರ ನಡೆಸುತ್ತಿದ್ದ ಅನುಮಾನದ ಮೇರೆಗೆ ಬಲಪಂಥೀಯರ ಗುಂಪೊಂದು ಕ್ರೈಸ್ತ ಪಾದ್ರಿ ಮೇಲೆ ದಾಳಿ ನಡೆಸಿರುವ ಘಟನೆ ರಾಯ್ಪುರದಲ್ಲಿ ನಡೆದಿದೆ. ಪೊಲೀಸ್ ಠಾಣೆಯಲ್ಲಿ ಈ ದಾಳಿ ನಡೆದಿರುವುದು ಅಚ್ಚರಿ.
ಬಲಪಂಥೀಯ ಸಂಘಟನೆಯ ಕಾರ್ಯಕರ್ತರು ಹರೀಶ್ ಸಾಹು ಎಂಬ ಪಾದ್ರಿಯ ಮೇಲೆ ಮತಾಂತರ ಆರೋಪ ಹೊರಿಸಿ ಪೊಲೀಸ್ ದೂರು ನೀಡಿದ್ದರು. ಈ ಸಂಬಂಧ ಪೊಲಿಸರು ಹರೀಶ್ ಅವರನ್ನು ಠಾಣೆಗೆ ಕರೆಸಿಕೊಂಡಿದ್ದರು.
ಈ ಸಂದರ್ಭ ಅಲ್ಲಿಯೇ ಇದ್ದ ಬಲಪಂಥೀಯ ಸಂಘಟನೆಯ ಕಾರ್ಯಕರ್ತರು ಪಾದ್ರಿ ಮೇಲೆ ದಾಳಿ ನಡೆಸಿದ್ದರು. ದಾಳಿ ಸಂದರ್ಭ ಪಾದ್ರಿ ಜೊತೆಗಿದ್ದ ಇಬ್ಬರು ವ್ಯಕ್ತಿಗಳು ಗಾಯಗೊಂಡಿರುವುದಾಗಿ ತಿಳಿದುಬಂದಿದೆ.
ಕ್ರೈಸ್ತ ಪಾದ್ರಿ ಮೇಲೆ ದಾಳಿ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Advertisement