ತಾಲಿಬಾನ್ ಬೆದರಿಕೆ ಕುರಿತು ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ; ಭಾರತದಲ್ಲಿರುವ ಆಫ್ಘನ್ ರನ್ನು ದೇಶ ಬಿಡಲು ಹೇಳುವುದಿಲ್ಲ!

ಅಫ್ಘಾನಿಸ್ತಾನದ ಪರಿಸ್ಥಿತಿಯ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್ ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೊತೆಗೆ ನಿನ್ನೆ ದೆಹಲಿಯ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದರು.
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಗಡಿಯಲ್ಲಿ ಆಯಾ ದೇಶಗಳ ಮಿಲಿಟರಿ ಪಡೆ ಕಣ್ಗಾವಲು
ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಗಡಿಯಲ್ಲಿ ಆಯಾ ದೇಶಗಳ ಮಿಲಿಟರಿ ಪಡೆ ಕಣ್ಗಾವಲು
Updated on

ನವದೆಹಲಿ: ಅಫ್ಘಾನಿಸ್ತಾನದ ಪರಿಸ್ಥಿತಿಯ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್ ಜೈಶಂಕರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೊತೆಗೆ ನಿನ್ನೆ ದೆಹಲಿಯ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದರು.

ಅಫ್ಘಾನಿಸ್ತಾನದ ಪಂಜ್ ಶಿರ್ ಪ್ರಾಂತ್ಯವನ್ನು ವಶಪಡಿಸಿಕೊಂಡ ತಾಲಿಬಾನ್ ಗೆಲುವು ಮತ್ತು ಐಎಸ್ ಐ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಫೈಝ್ ಹಮೀದ್ ತಾಲಿಬಾನ್ ನ ಸರ್ವೋಚ್ಛ ನಾಯಕ ಮುಲ್ಲಾ ಅಬ್ದುಲ್ ಘನಿ ಬರದರ್ ಜೊತೆಗೆ ನಡೆಸಿದ ಸಭೆಯ ಹಿನ್ನೆಲೆ ಮತ್ತು ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈ ಸಭೆ ನಡೆಸಿದ್ದಾರೆ.

ಕಳೆದ ತಿಂಗಳು ಆಗಸ್ಟ್ 15ರಂದು ತಾಲಿಬಾನ್ ಕಾಬುಲ್ ನ್ನು ವಶಪಡಿಸಿಕೊಂಡ ನಂತರ ಪಾಕಿಸ್ತಾನದ ಗುಪ್ತಚರ ಇಲಾಖೆಯ ಮುಖ್ಯಸ್ಥ ಆಫ್ಘಾನಿಸ್ತಾನಕ್ಕೆ ಭೇಟಿ ನೀಡಿ ಉನ್ನತ ಮಟ್ಟದ ಮಾತುಕತೆ ನಡೆಸಿರುವುದು ನೆರೆ ದೇಶಗಳಿಗೆ ಕುತೂಹಲಕಾರಿಯಾಗಿದೆ.

ತಾಲಿಬಾನ್ ಕುರಿತು ಭಾರತ ಮುಂದಿನ ದಿನಗಳಲ್ಲಿ ಯಾವ ರೀತಿಯ ಧೋರಣೆ ಹೊಂದುವುದು, ಅಫ್ಘಾನಿಸ್ತಾನದಲ್ಲಿ ಭಾರತ ವಿರೋಧಿ ಉಗ್ರ ಗುಂಪುಗಳನ್ನು ಹೇಗೆ ಮಟ್ಟ ಹಾಕುವುದು ಎಂಬ ಬಗ್ಗೆ ನಿನ್ನೆಯ ಸಭೆಯಲ್ಲಿ ಪ್ರಧಾನಿ ಮೋದಿ ತಮ್ಮ 
ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ಭಾರತ ಕಾಬೂಲ್‌ನಲ್ಲಿ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ, ವಿಶೇಷವಾಗಿ ಸರ್ಕಾರ ರಚನೆಯ ವಿಚಾರದಲ್ಲಿ ತಾಲಿಬಾನ್‌ಗಳು ಭಿನ್ನವಾಗಿದ್ದು, ಅಫ್ಘಾನಿಸ್ತಾನ ಮಣ್ಣನ್ನು ಭಾರತದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಿಗೆ ಮತ್ತು ಸ್ಥಳಾಂತರಿಸುವಿಕೆಗೆ ಬಳಸದಂತೆ ನೋಡಿಕೊಳ್ಳುವುದು ಭಾರತದ ತಕ್ಷಣದ ಆದ್ಯತೆಯಾಗಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಅನಿಶ್ಚಿತವಾಗಿ ಮುಂದುವರಿದಿದ್ದು, ಕೇಂದ್ರ ಗೃಹ ಸಚಿವಾಲಯವು ಭಾರತದಲ್ಲಿ ವಾಸಿಸುತ್ತಿರುವ ಯಾವುದೇ ಅಫ್ಘಾನ್ ಪ್ರಜೆಯನ್ನು ತನ್ನ ಅನುಮತಿಯಿಲ್ಲದೆ ದೇಶವನ್ನು ತೊರೆಯುವಂತೆ ಹೇಳುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಘಾನಿಸ್ತಾನವನ್ನು ತಾಲಿಬಾನ್‌ಗಳು ಸ್ವಾಧೀನಪಡಿಸಿಕೊಂಡ ಹದಿನೈದು ದಿನಗಳ ನಂತರ ಗೃಹ ಸಚಿವಾಲಯ ಈ ನಿರ್ಧಾರಕ್ಕೆ ಬಂದಿದೆ.  ಗೃಹ ಸಚಿವಾಲಯದ ಪೂರ್ವಾನುಮತಿಯಿಲ್ಲದೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ (ಎಫ್‌ಆರ್‌ಆರ್‌ಒ) ಯಾವುದೇ ಅಫ್ಘಾನಿಸ್ತಾನ ಪ್ರಜೆಯನ್ನು ಭಾರತವನ್ನು ಬಿಡಲು ಕೇಳುವುದಿಲ್ಲ ಮತ್ತು ಅಂತಹ ಪ್ರಕರಣಗಳನ್ನು ಎಫ್‌ಆರ್‌ಆರ್‌ಒ ಎಂಎಚ್‌ಎಗೆ ಉಲ್ಲೇಖಿಸುತ್ತದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತದಲ್ಲಿ ಈಗಾಗಲೇ ಅಫ್ಘಾನಿಸ್ತಾನ ಸೇರಿದಂತೆ ಎಲ್ಲಾ ದೇಶಗಳ ನಾಗರಿಕರಿಗೆ ನೀಡಲಾಗುವ ಎಲ್ಲಾ ವರ್ಗಗಳ ವೀಸಾಗಳನ್ನು ಸರ್ಕಾರವು "ಉಚಿತ ಆಧಾರದ ಮೇಲೆ" ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿದೆ. ತಾಲಿಬಾನ್ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಳ್ಳುವ ಮೊದಲು ಭಾರತಕ್ಕೆ ಬಂದ ಅನೇಕ ಅಫ್ಘಾನ್ ಪ್ರಜೆಗಳು ಭಾರತದಲ್ಲಿ ಆರು ತಿಂಗಳಿಗಿಂತ ಹೆಚ್ಚು ಕಾಲ ಉಳಿದಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಭಾರತದಲ್ಲಿ ಸಿಲುಕಿರುವ ವಿದೇಶಿ ಪ್ರಜೆಗಳಿಗೆ ನೀಡಲಾಗುವ ಯಾವುದೇ ಅತಿಯಾದ ದಂಡ ವಿಧಿಸದೆ, ನಿಯಮಿತ ವೀಸಾ ಅಥವಾ ಇ-ವೀಸಾ ಅಥವಾ ಸ್ಟೇ ಷರತ್ತು ಅವಧಿಯನ್ನು ಈಗಿರುವ ವಿಸ್ತರಣೆಯ ಸೌಲಭ್ಯವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲು ಗೃಹ ಸಚಿವಾಲಯ ನಿರ್ಧರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com