ನವದೆಹಲಿ: ಬಿಜೆಪಿ ಮತ್ತು ಆರ್ಎಸ್ಎಸ್ "ನಕಲಿ ಹಿಂದುಗಳು". ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಧರ್ಮವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಆರೋಪಿಸಿದ್ದಾರೆ.
ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸ್ಥಾಪನೆ ದಿನವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ನ ಸಿದ್ಧಾಂತವು ಬಿಜೆಪಿ-ಆರ್ಎಸ್ಎಸ್ಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಮತ್ತು ಎರಡು ಸಿದ್ಧಾಂತಗಳಲ್ಲಿ ಒಂದು ಮಾತ್ರ ದೇಶವನ್ನು ಆಳಬಲ್ಲದು ಎಂದರು.
ಲಕ್ಷ್ಮಿ ದೇವಿಯು ಒಬ್ಬರ ಗುರಿ ಸಾಧಿಸಲು ಸಹಾಯ ಮಾಡುತ್ತಾರೆ. ದುರ್ಗಾ ದೇವಿಯು ರಕ್ಷಿಸುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಪ್ರತಿಪಾದಿಸಿದ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಎಂದು ಹೇಳಿದ್ದಾರೆ.
"ಅವರು ಯಾವ ರೀತಿಯ ಹಿಂದುಗಳು? ಅವರು ನಕಲಿ ಹಿಂದುಗಳು. ಅವರು ಹಿಂದೂ ಧರ್ಮವನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅವರು ಧರ್ಮದ ದಲ್ಲಾಳಿಗಳು, ಆದರೆ ಅವರು ಹಿಂದುಗಳಲ್ಲ" ಎಂದು ರಾಹುಲ್ ಗಾಂಧಿ ಬಿಜೆಪಿ-ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.
Advertisement