ದೆಹಲಿಯಲ್ಲಿ ವಾಯು ಮಾಲೀನ್ಯ ಭೀತಿ: ಈ ವರ್ಷವೂ ಪಟಾಕಿ ಬಳಕೆ, ಮಾರಾಟ ನಿಷೇಧಿಸಿದ ಕೇಜ್ರಿವಾಲ್ ಸರ್ಕಾರ!
ರಾಷ್ಟ್ರ ರಾಜಧಾನಿ ದೆಹಲಿ ನಿವಾಸಿಗಳಿಗೆ ಈ ವರ್ಷವೂ ದೀಪಾವಳಿ ಸಂಭ್ರಮ ದೂರವಾಗಿದ್ದು, ವಾಯುಮಾಲೀನ್ಯ ಹಿನ್ನಲೆಯಲ್ಲಿ ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ಪಟಾಕಿ ಬಳಕೆ, ಮಾರಾಟಕ್ಕೆ ನಿಷೇಧ ಹೇರಿದೆ.
Published: 15th September 2021 02:26 PM | Last Updated: 15th September 2021 04:13 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ನಿವಾಸಿಗಳಿಗೆ ಈ ವರ್ಷವೂ ದೀಪಾವಳಿ ಸಂಭ್ರಮ ದೂರವಾಗಿದ್ದು, ವಾಯುಮಾಲೀನ್ಯ ಹಿನ್ನಲೆಯಲ್ಲಿ ದೆಹಲಿಯ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ಪಟಾಕಿ ಬಳಕೆ, ಮಾರಾಟಕ್ಕೆ ನಿಷೇಧ ಹೇರಿದೆ.
पिछले साल व्यापारियों द्वारा पटाखों के भंडारण के पश्चात प्रदूषण की गंभीरता को देखत हुए देर से पूर्ण प्रतिबंध लगाया गया जिससे व्यापारियों का नुकसान हुआ था। सभी व्यापारियों से अपील है कि इस बार पूर्ण प्रतिबंध को देखते हुए किसी भी तरह का भंडारण न करें।
— Arvind Kejriwal (@ArvindKejriwal) September 15, 2021
ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ವರ್ಷವೂ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕಳೆದ ವರ್ಷದಂತೆಯೇ ಈ ವರ್ಷವೂ ಪಟಾಕಿಗಳ ಶೇಖರಣೆ, ಮಾರಾಟ ಹಾಗೂ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು ಎಂದು ಹೇಳಿದ್ದಾರೆ.
पिछले 3 साल से दीवाली के समय दिल्ली के प्रदूषण की खतरनाक स्तिथि को देखते हुए पिछले साल की तरह इस बार भी हर प्रकार के पटाखों के भंडारण, बिक्री एवं उपयोग पर पूर्ण प्रतिबंध लगाया जा रहा है। जिससे लोगों की जिंदगी बचाई जा सके।
— Arvind Kejriwal (@ArvindKejriwal) September 15, 2021
ದೆಹಲಿಯಲ್ಲಿ ವಾಯು ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿರುವ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಲ್ಲಿ ಪಟಾಕಿ ಹಚ್ಚುವುದಕ್ಕೆ ನಿಷೇಧ ಹೇರಲಾಗಿತ್ತು. ಈ ನಿಷೇಧ ಈ ವರ್ಷವೂ ಮುಂದುವರೆಯಲಿದೆ. ಅಲ್ಲದೆ ಸಂಪೂರ್ಣ ನಿಷೇಧದ ದೃಷ್ಟಿಯಿಂದ ಪಟಾಕಿಗಳನ್ನು ಸಂಗ್ರಹಿಸಬೇಡಿ ಎಂದು ನಾನು ವ್ಯಾಪಾರಿಗಳಿಗೆ ಮನವಿ ಮಾಡುತ್ತೇನೆ ಎಂದು ಕೇಜ್ರಿವಾಲ್ ತಮ್ಮ ಟ್ವೀಟ್ ನಲ್ಲಿ ಮನವಿ ಮಾಡಿದ್ದಾರೆ.