ರಾಮಘರ್: ಬುಧವಾರ ಬೆಳಗ್ಗೆ ಬಸ್ಸಿಗೆ ಕಾರು ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸಜೀವ ದಹನವಾಗಿರುವ ಘಟನೆ ಜಾರ್ಖಂಡ್ ನ ರಾಮಘರ್ ಜಿಲ್ಲೆಯಲ್ಲಿ ನಡೆದಿದೆ.
ರಾಜರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಮುರಬಂದದಲ್ಲಿ ಈ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಕೂಡ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮಘರ್-ಗೋಲಾ ಮುಖ್ಯ ರಸ್ತೆಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ವ್ಯಾಗನರ್ ಕಾರು ಬಸ್ಸಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿಯ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.
ಮೃತಪಟ್ಟವರಲ್ಲಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಮತ್ತು ಟೀನೇಜ್ ಹುಡುಗ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರು ಪಾಟ್ನಾದವರಾಗಿದ್ದು, ಪೊಲೀಸರು ಅವರ ವಿಳಾಸ ಮತ್ತು ಇತರ ವಿವರಗಳನ್ನು ಪತ್ತೆ ಮಾಡುತ್ತಿದ್ದಾರೆ. ಘಟನೆಗೆ ಪೊಲೀಸರು ಕಾರಣ ಪತ್ತೆ ಹಚ್ಚುತ್ತಿದ್ದಾರೆ.
Advertisement