ಜಮ್ಮು ಕಾಶ್ಮೀರ: ಭಾರತೀಯ ಸೈನಿಕರ ಮೇಲೆ ಉಗ್ರರ ದಾಳಿ: ಸಾವು ನೋವು ವರದಿಯಾಗಿಲ್ಲ

ಉಗ್ರರು ಪರಾರಿಯಾಗುವ ಮುನ್ನ ತಮ್ಮ ಶಸ್ತ್ರಾಸ್ತ್ರಗಳನ್ನು ಸ್ಥಳದಲ್ಲಿಯೇ ಬಿಟ್ಟುಹೋಗಿದ್ದಾರೆ ಎಂಡು ತಿಳಿದುಬಂದಿದೆ. ಅದನ್ನು ಸೈನಿಕರು ವಶಪಡಿಸಿಕೊಂಡಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ನೂರ್ ಬಾಗ್ ಎಂಬಲ್ಲಿ ಭಾರತೀಯ ಭದ್ರತಾಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಸ್ಥಳೀಯ ಪೊಲೀಸರು ಘಟನೆಯಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ ಎಂದು ದೃಢಪಡಿಸಿದ್ದಾರೆ. 

ಉಗ್ರರ ದಾಳಿಗೆ ಭಾರತೀಯ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಈ ಸಂದರ್ಭ ಉಗ್ರರನ್ನು ಭಾರತೀಯ ಸೈನಿಕರು ಬೆನ್ನಟ್ಟಿದಾಗ ಉಗ್ರರು ತಪ್ಪಿಸಿಕೊಂಡು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಉಗ್ರರು ಪರಾರಿಯಾಗುವ ಮುನ್ನ ತಮ್ಮ ಶಸ್ತ್ರಾಸ್ತ್ರಗಳನ್ನು ಸ್ಥಳದಲ್ಲಿಯೇ ಬಿಟ್ಟುಹೋಗಿದ್ದಾರೆ ಎಂಡು ತಿಳಿದುಬಂದಿದೆ. ಅದನ್ನು ಸೈನಿಕರು ವಶಪಡಿಸಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com