ಸಿಧು ಪಾಕ್ ಸ್ನೇಹಿತ, ದೇಶದ ಭದ್ರತೆಗೆ ದೊಡ್ಡ ಅಪಾಯ; ನನ್ನ ಸೈನಿಕರ ತ್ಯಾಗ-ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಕ್ಯಾಪ್ಟನ್ ಅಮರೀಂದರ್ ಸಿಂಗ್
ನವಜೋತ್ ಸಿಂಗ್ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಅಪ್ತ ಸ್ನೇಹಿತರಾಗಿದ್ದು, ದೇಶದ ಭದ್ರತೆಗೆ ದೊಡ್ಡ ಅಪಾಯವಾಗಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.
Published: 18th September 2021 11:20 PM | Last Updated: 18th September 2021 11:20 PM | A+A A-

ಕ್ಯಾಪ್ಟನ್ ಅಮರೀಂದರ್ ಸಿಂಗ್
ಚಂಡೀಘಡ: ನವಜೋತ್ ಸಿಂಗ್ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಅಪ್ತ ಸ್ನೇಹಿತರಾಗಿದ್ದು, ದೇಶದ ಭದ್ರತೆಗೆ ದೊಡ್ಡ ಅಪಾಯವಾಗಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.
#WATCH | For sake of my country, I'll oppose his (Navjot Singh Sidhu) name for CM of Punjab. It's a matter of national security. Pakistan PM Imran Khan is his friend. Sidhu has a relation with Army chief Gen Qamar Javed Bajwa: Amarinder Singh in an exclusive interview to ANI pic.twitter.com/imeuoyDxem
— ANI (@ANI) September 18, 2021
ರಾಜಿನಾಮೆ ಬೆನ್ನಲ್ಲೇ ಎಎನ್ಐ ಸುದ್ದಿಸಂಸ್ಥೆ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅಮರೀಂದರ್ ಸಿಂಗ್ ಅವರು, ನವಜೋತ್ ಸಿಂಗ್ ಸಿಧು ಅವರು ಪಾಕಿಸ್ತಾನದೊಂದಿಗೆ ಸಂಪರ್ಕದಲ್ಲಿದ್ದಾರೆ. ಪಕ್ಷವು ಅವರನ್ನು ಪಂಜಾಬ್ ಮುಖ್ಯಮಂತ್ರಿಯನ್ನಾಗಿಸುವ ಕ್ರಮಕ್ಕೆ ಮುಂದಾದರೆ ನಾನು ವಿರೋಧಿಸುತ್ತೇನೆ ಎಂದು ಹೇಳಿದ್ದಾರೆ.
He is friends with (Pakistan Army chief) Qamar Javed Bajwa and Pakistan Prime Minister Imran Khan, I will oppose if he is chosen as the next CM face...: Former Punjab CM Amarinder Singh in an exclusive interview to ANI pic.twitter.com/IxdBjjtNYh
— ANI (@ANI) September 18, 2021
'ಸಿಧು ಅವರನ್ನು ಮುಖ್ಯಮಂತ್ರಿಯನ್ನಾಗಿಸುವ ಯಾವುದೇ ನಡೆಯನ್ನು ದೇಶದ ಭದ್ರತೆಯ ದೃಷ್ಟಿಯಿಂದ ನಾನು ವಿರೋಧಿಸುತ್ತೇನೆ. ಹಾಗೆಯೇ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸಿಧು ʼಅಸಮರ್ಥʼ ಎಂದೂ ಅಮರೀಂದರ್ ಸಿಂಗ್ ಟೀಕಿಸಿದ್ದಾರೆ.
...Navjot Singh Sidhu is an incompetent man, he is going to be a disaster. I will oppose his name for the next CM face. He has a connection with Pakistan. It will be a threat to national security...: Former Punjab CM Amarinder Singh in an exclusive interview to ANI pic.twitter.com/ZaVZxiwG63
— ANI (@ANI) September 18, 2021
ʼನವಜೋತ್ ಸಿಂಗ್ ಸಿಧು ಅಸಮರ್ಥರಾಗಿದ್ದು, ಹಾನಿ ಸೃಷ್ಟಿಸಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಸಿಧು ಹೆಸರನ್ನು ವಿರೋಧಿಸುತ್ತೇನೆ. ಅವರು ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದಾರೆ. ಇದು ರಾಷ್ಟ್ರೀಯ ಭದ್ರತೆಗೂ ಅಪಾಯಕಾರಿ... ಸಿದ್ದುಗೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಜೊತೆ ಸಂಬಂಧವಿದೆ. ದೇಶಕ್ಕಾಗಿ ಹಲವು ಯೋಧರು ಪ್ರಾಣತ್ಯಾಗ ಮಾಡಿದ್ದಾರೆ. ಪಾಕಿಸ್ತಾನದ ದಾಳಿಯಲ್ಲಿ ನಾನು ನೂರಾರು ಸೈನಿಕರನ್ನು ಕಳೆದುಕೊಂಡಿದ್ದೇವೆ. ಅವರ ಪ್ರಾಣ ತ್ಯಾಗ-ಬಲಿದಾನ ವ್ಯರ್ಥವಾಗಲು ಬಿಡಬಾರದು ಎಂದು ಹೇಳಿದರು.
ಇದನ್ನೂ ಓದಿ: ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ
ಆದಾಗ್ಯೂ, ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಮುಂದುವರಿಸಬೇಕೇ ಎಂಬುದನ್ನು ಪಕ್ಷವು ನಿರ್ಧರಿಸಲಿದೆ ಎಂದಿದ್ದಾರೆ.