ಚೆನ್ನೈ: ತಮಿಳು ನಾಡಿನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ರವಿ ಶನಿವಾರ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ. ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ನೂತನ ರಾಜ್ಯಪಾಲರಿಗೆ ರಾಜಭವನದಲ್ಲಿ ಇಂದು ಅಧಿಕಾರ ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಮಾಣವಚನ ಸ್ವೀಕಾರ ಸಮಾರಂಭ ಮುಗಿದ ಮೇಲೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸಚಿವರುಗಳು ಮತ್ತು ವಿಧಾನಸಭೆ ಸ್ಪೀಕರ್ ಎಂ ಅಪ್ಪವು ಅವರನ್ನು ರಾಜ್ಯಪಾಲರಿಗೆ ಪರಿಚಯಿಸಿದರು.
Advertisement