ನವದೆಹಲಿ: ಕಾಮಗಾರಿ ಪೂರ್ಣಗೊಂಡ ನಂತರ ಮಹತ್ವಾಕಾಂಕ್ಷಿ ಯೋಜನೆಯಾದ ದೆಹಲಿ- ಮುಂಬೈ ಎಕ್ಸ್ ಪ್ರೆಸ್ ವೇ ಹೆದ್ದಾರಿಯಿಂದ ಸರ್ಕಾರದ ಬೊಕ್ಕಸಕ್ಕೆ 1,000- 1,500 ಕೋಟಿ ರೂ. ಆದಾಯ ಸೇರ್ಪಡೆಗೊಳ್ಲಲಿದೆೆಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೆಹಲಿ- ಮುಂಬೈ ಎಕ್ಸ್ ಪ್ರೆಸ್ ವೇ 2023ರಿಂದ ಸಾರ್ವಜನಿಕ ಬಳಕೆಗೆ ಸಿದ್ಧಗೊಳ್ಳಲಿರುವ ಈ ಎಕ್ಸ್ ಪ್ರೆಸ್ ಹೈವೇ ಸರ್ಕಾರದ ಪಾಲಿಗೆ ಚಿನ್ನದ ಗಣಿ ಎಂದು ಹೋಲಿಕೆ ಮಾಡಿದ್ದಾರೆ.
ಸದ್ಯ ದೇಶಾದ್ಯಂತ ನಡೆಯುತ್ತಿರುವ ರಸ್ತೆ ಸೌಕರ್ಯ ಅಭಿವೃದ್ಧಿ ಯೋಜನೆಗಳಿಂದಾಗಿ ಮುಂದಿನ ೫ ವರ್ಷಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಗಳಿಂದ ವಾರ್ಷಿಕ 1.40 ಲಕ್ಷ ಕೋಟಿ ಆದಾಯ ನಿರೀಕ್ಷಿಸಬಹುದಾಗಿದೆ ಎಂದವರು ತಿಳಿಸಿದ್ದಾರೆ. ಸದ್ಯ ಟೋಲ್ ಗಳಿಂದ ಸಂಗ್ರಹವಾಗುತ್ತಿರುವ ಮೊತ್ತ 40,000 ಕೋಟಿ ರೂ.
ದೆಹಲಿ- ಮುಂಬೈ ಎಕ್ಸ್ ಪ್ರೆಸ್ ವೇ 4 ರಾಜ್ಯಗಳನ್ನು ಹಾದುಹೋಗುತ್ತಿದೆ. ವಿಶ್ವದಲ್ಲೇ ಅತಿದೊಡ್ಡ ರಸ್ತೆ ನಿರ್ಮಾಣ ಕಾಮಗಾರಿ ಎನ್ನುವ ಹೆಸರಿಗೆ ಅದು ಪಾತ್ರವಾಗಲಿದೆ ಎಂದು ಗಡ್ಕರಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿಗಳಿಗೆ ತಾವು ಎಷ್ಟು ದಿನ ಅಧಿಕಾರದಲ್ಲಿರ್ತೀವಿ ಅನ್ನೋದು ಗೊತ್ತಿಲ್ಲ: ಗಡ್ಕರಿ
ಗಡ್ಕರಿ ಉತ್ತಮ ವ್ಯಕ್ತಿ. ಆದರೆ, ಅವರಿರುವ ಪಕ್ಷ ಸರಿಯಲ್ಲ: ಮಹಾರಾಷ್ಟ್ರ ಸಚಿವ ಅಶೋಕ್ ಚವಾಣ್
ರಸ್ತೆ ನಿರ್ಮಾಣಕ್ಕೆ 15 ಲಕ್ಷ ಕೋಟಿ ರೂಪಾಯಿ ವೆಚ್ಚ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ
ಒಂದು ವರ್ಷದೊಳಗೆ ದೇಶದಲ್ಲಿನ ಎಲ್ಲ ಟೋಲ್ ಬೂತ್ ತೆರವು: ನಿತಿನ್ ಗಡ್ಕರಿ
ಹಳೆ ವಾಹನ ವಿಲೇವಾರಿ ನೀತಿ ಲೋಕಸಭೆಯಲ್ಲಿ ಘೋಷಿಸಿದ ನಿತಿನ್ ಗಡ್ಕರಿ
Advertisement