ವಿಷ ಹರಡುತ್ತಿರುವ ದೇಶದಲ್ಲಿ ಅಮೃತಮಹೋತ್ಸವ?: ಅಸ್ಸಾಂ ಪೊಲೀಸರ ತೆರವು ಕಾರ್ಯಚರಣೆ ವಿರುದ್ಧ ರಾಹುಲ್ ಕಿಡಿ
ಅಸ್ಸಾಂ ಸರ್ಕಾರವು ದರ್ರಾಂಗ್ ಜಿಲ್ಲೆಯ ಧೋಲ್ಪುರ್ ನಲ್ಲಿ ಆರಂಭಿಸಿರುವ ತೆರವು ಕಾರ್ಯಾಚರಣೆಯನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಖಂಡಿಸಿದ್ದಾರೆ.
Published: 25th September 2021 03:16 PM | Last Updated: 25th September 2021 03:24 PM | A+A A-

ರಾಹುಲ್ ಗಾಂಧಿ
ನವದೆಹಲಿ: ಅಸ್ಸಾಂ ಸರ್ಕಾರವು ದರ್ರಾಂಗ್ ಜಿಲ್ಲೆಯ ಧೋಲ್ಪುರ್ ನಲ್ಲಿ ಆರಂಭಿಸಿರುವ ತೆರವು ಕಾರ್ಯಾಚರಣೆಯನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಖಂಡಿಸಿದ್ದಾರೆ.
ಅಸ್ಸಾಂ ಸರ್ಕಾರದ ಈ ಹೊರಹಾಕುವ ಕಾರ್ಯಾಚರಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, "ದ್ವೇಷದ ವಿಷವು ದೇಶದಲ್ಲಿ ಹರಡುತ್ತಿರುವಾಗ, ಯಾವ ರೀತಿಯ ಅಮೃತ್ ಮಹೋತ್ಸವ?” ಸ್ವಾತಂತ್ರ್ಯ ಎಂದರೇನು” ಎಂದು ಪ್ರಶ್ನಿಸಿದ್ದಾರೆ.
जब देश में नफ़रत का ज़हर फैलाया जा रहा है तो कैसा अमृत महोत्सव?
— Rahul Gandhi (@RahulGandhi) September 25, 2021
अगर सबके लिए नहीं है तो कैसी आज़ादी? #Assam
ಅಸ್ಸಾಂನ ದರಾಂಗ್ ಜಿಲ್ಲೆಯಲ್ಲಿ ಒತ್ತುವರಿ ತೆರವುಗೊಳಿಸುವ ವೇಳೆ ಪೊಲೀಸರು ಸ್ಥಳೀಯರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಬಂದೂಕು, ಲಾಠಿಗಳಿಂದ ಸಜ್ಜಿತರಾಗಿದ್ದ ಪೊಲೀಸರು ಜನರನ್ನು ಅಟ್ಟಿಸಿಕೊಂಡು ಹೋಗಿ ಥಳಿಸುವುದು ಕ್ಯಾಮೆರಾದಲ್ಲಿ ಸೆರೆ ಆಗಿದೆ. ಈ ಕುರಿತ ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಇದನ್ನೂ ಓದಿ: ಅಸ್ಸಾಂ: ತೆರವು ಕಾರ್ಯಾಚರಣೆ ವೇಳೆ ಪೊಲೀಸ್ ಗುಂಡಿನ ದಾಳಿ, ಜನರ ಮೇಲಿನ ಹಲ್ಲೆ ಕ್ಯಾಮೆರಾದಲ್ಲಿ ದಾಖಲು
ಧೋಲ್ಪುರದಲ್ಲಿ ಸುಮಾರು 800 ಕುಟುಂಬಗಳನ್ನು ಸೋಮವಾರ ಅಸ್ಸಾಂ ಸರ್ಕಾರ ತೆರವುಗೊಳಿಸಿತ್ತು. ಕೃಷಿ ಯೋಜನೆಗಾಗಿ 4,500 ಬಿಘಾದಷ್ಟು ಜಮೀನನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ. ಸ್ಥಳೀಯರು ಕಲ್ಲುತೂರಾಟ ನಡೆಸಿದ್ದರಿಂದ ಅನಿವಾರ್ಯವಾಗಿ ಬಲಪ್ರಯೋಗ ಮಾಡಬೇಕಾಯಿತು ಎಂದು ಪೊಲೀಸರು ಹೇಳಿದ್ದಾರೆ.
What protocol orders firing to the chest of a lone man coming running with a stick @DGPAssamPolice @assampolice ? Who is the man in civil clothes with a camera who repeatedly jumps with bloodthirsty hate on the body of the fallen (probably dead) man? pic.twitter.com/gqt9pMbXDq
— Kavita Krishnan (@kavita_krishnan) September 23, 2021