ಅಕ್ರಮ ಹಣ ವರ್ಗಾವಣೆ: ಜಾರಿ ನಿರ್ದೇಶನಾಲಯದಿಂದ ಅಜಂ ಖಾನ್ ವಿಚಾರಣೆ

ಉತ್ತರ ಪ್ರದೇಶದ ಸೀತಾಪುರ ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ
ಅಜಂ ಖಾನ್
ಅಜಂ ಖಾನ್

ಸೀತಾಪುರ: ಉತ್ತರ ಪ್ರದೇಶದ ಸೀತಾಪುರ ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಜಂ ಖಾನ್ ಅವರನ್ನು ವಿಚಾರಣೆ ನಡೆಸಿದ್ದಾಗಿ ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಸೆಪ್ಟೆಂಬರ್ 20 ರಂದು, ಇಡಿ ಅಧಿಕಾರಿಗಳು ಯುಪಿ ನಾಯಕರಾದ ಅಜಂ ಖಾನ್ ಮತ್ತು ಮುಖ್ತಾರ್ ಅನ್ಸಾರಿ, ಅತೀಕ್ ಅಹ್ಮದ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ  ಸಂಬಂಧಿಸಿದಂತೆ ವಿಚಾರಣೆಗೆ ನ್ಯಾಯಾಲಯದಿಂದ ಅನುಮತಿ ಪಡೆದಿದ್ದಾಗಿ ತಿಳಿಸಿದರು.

ಈ ಮೂವರು ರಾಜಕೀಯ ನಾಯಕರುಗಳು ವಿವಿಧ ಪ್ರಕರಣಗಳಡಿ ಉತ್ತರ ಪ್ರದೇಶದ ವಿವಿಧ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ಅಜಂಖಾನ್ ವಿರುದ್ಧ ಹಲವು ಕೇಸ್ ಗಳು ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com