ಅಮಿತ್ ಶಾ ಭೇಟಿ ಮಾಡಿದ ಅಮರೀಂದರ್ ಸಿಂಗ್, ಬಿಜೆಪಿ ಸೇರುವ ವದಂತಿಗೆ ಮತ್ತಷ್ಟು ಪುಷ್ಟಿ

ಪಂಜಾಬ್‌ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಬುಧವಾರ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು,...
ಅಮರೀಂದರ್ ಸಿಂಗ್
ಅಮರೀಂದರ್ ಸಿಂಗ್
Updated on

ನವದೆಹಲಿ: ಪಂಜಾಬ್‌ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಬುಧವಾರ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು, ಕ್ಯಾಪ್ಟನ್ ಕೇಸರಿ ಪಕ್ಷ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿದ್ದಾರೆ.

ಅಮರೀಂದರ್ ಸಿಂಗ್ ಅವರು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮಂಗಳವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದು, ಇಂದು ಅಮಿತ್ ಶಾ ಭೇಟಿ ಮಾಡಿದ್ದಾರೆ. ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.

ಅಮರೀಂದರ್ ಸಿಂಗ್ ಹಾಗೂ ಅಮಿತ್ ಶಾ ಭೇಟಿ ಕೇವಲ "ಸೌಜನ್ಯದ ಭೇಟಿ" ಎಂದು ಪಂಜಾಬ್ ಮಾಜಿ ತಂಡ ಹೇಳಿಕೊಂಡಿದೆ. ಆದರೆ ಸಿಂಗ್-ಶಾ-ನಡ್ಡಾ ಭೇಟಿಯು ಮುಂದಿನ ದಿನಗಳಲ್ಲಿ ಪಂಜಾಬ್ ಕಾಂಗ್ರೆಸ್ ನಾಯಕ ಬಿಜೆಪಿ ಸೇರುವ ವದಂತಿಗೆ ಮತ್ತಷ್ಟು ಪುಷ್ಟಿ ನೀಡಿದೆ.

ಕೆಲವು ವರದಿಗಳ ಪ್ರಕಾರ, ಅಮರೀಂದರ್ ಸಿಂಗ್ ಅವರು ಬಿಜೆಪಿ ಸೇರುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಕೇಂದ್ರ ಕೃಷಿ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com