ದೇಶದಲ್ಲಿ ಆರ್ಥಿಕ ಹಿಂಜರಿತದ ಸಾಧ್ಯತೆ ಇಲ್ಲ- ನಿರ್ಮಲಾ ಸೀತಾರಾಮನ್

ಭಾರತದಲ್ಲಿ ಆರ್ಥಿಕ ಹಿಂಜರಿತ ಅಥವಾ ನಿಶ್ಚಲತೆಯ ಸಾಧ್ಯತೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ. 
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Updated on

ನವದೆಹಲಿ: ಭಾರತದಲ್ಲಿ ಆರ್ಥಿಕ ಹಿಂಜರಿತ ಅಥವಾ ನಿಶ್ಚಲತೆಯ ಸಾಧ್ಯತೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಹೇಳಿದ್ದಾರೆ. 

ಲೋಕಸಭೆಯಲ್ಲಿ ಬೆಲೆ ಏರಿಕೆ ಕುರಿತ ಚರ್ಚೆಯಲ್ಲಿ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಮನ್, ಆರ್ಥಿಕತೆಯ ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು ಪ್ರಬಲವಾಗಿರುವುದರಿಂದ ದೇಶ ಆರ್ಥಿಕ ಹಿಂಜರಿತ ಅಥವಾ ನಿಶ್ಚಲತೆಯ ಅಪಾಯವನ್ನು ಎದುರಿಸುತ್ತಿಲ್ಲ ಎಂದರು. ಸರಕು ಮತ್ತು ಸೇವಾ ತೆರಿಗೆ ಸಂಗ್ರಹ ಮತ್ತು ಖರೀದಿ ವ್ಯವಸ್ಥಾಪಕರ ಸೂಚ್ಯಂಕವು ದೇಶದ ಆರ್ಥಿಕತೆಯು ಹೆಚ್ಚು ಸದೃಢವಾಗುತ್ತಿರುವುದನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು. 

ಜುಲೈನಲ್ಲಿ ಜಿಎಸ್ ಟಿ ಕಲೆಕ್ಷನ್ ನಲ್ಲಿ ಶೇ. 28 ರಷ್ಟು ಏರಿಕೆಯಾಗಿದ್ದು, 1.49 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಇದು ಎರಡನೇ ಅತಿ ಹೆಚ್ಚಿನ ತೆರಿಗೆ ಆದಾಯವಾಗಿದೆ. ಸರಕು ಮತ್ತು ಸೇವಾ ತೆರಿಗೆ ಪ್ರಾರಂಭವಾದಾಗಿನಿಂದ ಆರನೇ ಬಾರಿಗೆ ಮಾಸಿಕ ಜಿಎಸ್‌ಟಿ ಸಂಗ್ರಹವು ರೂ. 1.40 ಲಕ್ಷ ಕೋಟಿ ದಾಟಿದೆ ಎಂದು ಅವರು ತಿಳಿಸಿದರು.

ಇತರ ರಾಷ್ಟ್ರಗಳಿಗೆ ಹೋಲಿಸಿದರೆ ದೇಶದಲ್ಲಿ ಬ್ಯಾಂಕಿಂಗ್ ಕ್ಷೇತ್ರ ಆರೋಗ್ಯಕರವಾಗಿದೆ. ಚಿಲ್ಲರೆ ಹಣದುಬ್ಬರವನ್ನು ಶೇಕಡಾ 7 ಕ್ಕಿಂತ ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ.  ಸರ್ಕಾರ ತೆಗೆದುಕೊಂಡ ಕ್ರಮಗಳ ನಂತರ ಖಾದ್ಯ ತೈಲಗಳ ಬೆಲೆಗಳನ್ನು ಸರಿಯಾಗಿ ನಿಗದಿಪಡಿಸಲಾಗಿದೆ ಎಂದು ಸಚಿವರು ತಿಳಿಸಿದರು.  ಬೆಲೆ ಏರಿಕೆ ಕುರಿತು ವಿತ್ತ ಸಚಿವರ ಉತ್ತರದಿಂದ ತೃಪ್ತಗೊಳ್ಳದ ಕಾಂಗ್ರೆಸ್ ಸದಸ್ಯರು ಸದನದಿಂದ ಹೊರ ನಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com