ಪಶ್ಚಿಮ ಬಂಗಾಳ: ಬಸ್, ಆಟೋ ಮುಖಾಮುಖಿ ಡಿಕ್ಕಿ, 9 ಮಂದಿ ದುರ್ಮರಣ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಪ್ರಧಾನಿ

ಪಶ್ಚಿಮ ಬಂಗಾಳದ ಬಿರ್ ಭೂಮ್ ಜಿಲ್ಲೆಯಲ್ಲಿ ಇಂದು ರಾಜ್ಯ ಸಾರಿಗೆ ಸಂಸ್ಥೆ ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 8 ಮಹಿಳೆಯರು ಸೇರಿದಂತೆ 9 ಮಂದಿ ದುರ್ಮರಣ ಹೊಂದಿದ್ದಾರೆ
ಬಸ್ ಮತ್ತು ಆಟೋ ನಡುವಿನ ಅಪಘಾತದ ಚಿತ್ರ
ಬಸ್ ಮತ್ತು ಆಟೋ ನಡುವಿನ ಅಪಘಾತದ ಚಿತ್ರ
Updated on

ಬಿರ್ ಭೂಮ್: ಪಶ್ಚಿಮ ಬಂಗಾಳದ ಬಿರ್ ಭೂಮ್ ಜಿಲ್ಲೆಯಲ್ಲಿ ಇಂದು ರಾಜ್ಯ ಸಾರಿಗೆ ಸಂಸ್ಥೆ ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 8 ಮಹಿಳೆಯರು ಸೇರಿದಂತೆ 9 ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ. ರಾಮ್ ಪುರಹತ್ ನ ಮಲ್ಲರ್ ಪುರ ಬಳಿ ಈ ಅಪಘಾತ ಸಂಭವಿಸಿದೆ.

ಜನರಿಂದ ತುಂಬಿದ್ದ ಆಟೋ ಎದುರಿಗೆ ಬರುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆಟೋದಲ್ಲಿದ್ದ 8 ಮಹಿಳಾ ಕೃಷಿ ಕಾರ್ಮಿಕರು ಹಾಗೂ ಆಟೋ ಚಾಲಕ ಮೃತಪಟ್ಟಿರುವುದಾಗಿ ಬಿರ್ ಭೂಮ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ನಾಥ್ ತ್ರಿಪಾಠಿ ಹೇಳಿದ್ದಾರೆ. ಮಹಿಳೆಯರು ಭತ್ತದ ಗದ್ದೆಯಿಂದ ಮನೆಗೆ ಹಿಂತಿರುಗುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಈ ಅಪಘಾತದ ಬಗ್ಗೆ ದು:ಖ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಸಂಬಂಧಿಕರಿಗೆ 2 ಲಕ್ಷ ಹಾಗೂ ಗಾಯಾಗಳುಗಳಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com