ಬೆತ್ತಲೆ ಫೋಟೋ ಶೂಟ್ ವಿವಾದ: ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶ ಕೇಳಿದ ನಟ ರಣವೀರ್ ಸಿಂಗ್ 

ಬಾಲಿವುಡ್ ನಟ ರಣವೀರ್ ಸಿಂಗ್ ತಮ್ಮ ವಿರುದ್ಧ ದಾಖಲಾಗಿರುವ  ಬೆತ್ತಲೆ ಫೋಟೋ ಶೂಟ್ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶವನ್ನು ಕೇಳಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ನಟ ರಣವೀರ್ ಸಿಂಗ್
ನಟ ರಣವೀರ್ ಸಿಂಗ್
Updated on

ಮುಂಬೈ: ಬಾಲಿವುಡ್ ನಟ ರಣವೀರ್ ಸಿಂಗ್ ತಮ್ಮ ವಿರುದ್ಧ ದಾಖಲಾಗಿರುವ  ಬೆತ್ತಲೆ ಫೋಟೋ ಶೂಟ್ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗಲು ಹೆಚ್ಚಿನ ಸಮಯಾವಕಾಶವನ್ನು ಕೇಳಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ರಣವೀರ್ ಸಿಂಗ್ ವಿರುದ್ಧ ಚೆಂಬೂರು ಠಾಣೆಯಲ್ಲಿ ದಾಖಲಾಗಿರುವ ಎಫ್ ಐಆರ್ ಗೆ ಸಂಬಂಧಿಸಿದಂತೆ ನಾಳೆ ವಿಚಾರಣೆಗಾಗಿ ಹಾಜರಾಗುವಂತೆ ಸಮನ್ಸ್ ನೀಡಲಾಗಿದ್ದು,  ತನಿಖೆಗೆ ಹಾಜರಾಗಲು ಹೆಚ್ಚಿನ ಸಮಾಯವಕಾಶವನ್ನು ನಟ ಕೇಳಿರುವುದಾಗಿ  ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಆಗಸ್ಟ್ 12 ರಂದು ಚೆಂಬೂರ್ ಪೊಲೀಸ್ ಠಾಣೆಯ ಸಿಬ್ಬಂದಿ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ತನಿಖೆಗೆ ಹಾಜರಾಗಲು ನೋಟಿಸ್ ನೀಡಿದ್ದರು, ಆದರೆ ಅವರು ಮುಂಬೈನಲ್ಲಿಲ್ಲ, ಆಗಸ್ಟ್ 16 ರಂದು ಅವರು ನಗರಕ್ಕೆ ಹಿಂತಿರುಗಲಿದ್ದಾರೆ ಎಂದು ಅವರಿಗೆ ತಿಳಿಸಲಾಗಿತ್ತು. 

ಲಾಭೋದ್ದೇಶವಿಲ್ಲದ ಸಂಸ್ಥೆಯ ಪದಾಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಕಳೆದ ತಿಂಗಳು ಚೆಂಬೂರ್ ಪೊಲೀಸ್ ಠಾಣೆಯಲ್ಲಿ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ರಣವೀರ್ ಸಿಂಗ್ ತನ್ನ ಬೆತ್ತಲೆ ಫೋಟೋ ಶೂಟ್ ಮೂಲಕ ಮಹಿಳೆಯರ ಭಾವನೆಗಳನ್ನು ನೋಯಿಸಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com