
ಪ್ರಯಾಗ್ರಾಜ್: ಫಿರೋಜಾಬಾದ್ ಪೊಲೀಸ್ ಲೈನ್ನ ಮೆಸ್ನಲ್ಲಿ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದ ಉತ್ತರ ಪ್ರದೇಶದ ಪೊಲೀಸ್ ಪೇದೆ ಮನೋಜ್ ಕುಮಾರ್ ಅವರ ವರ್ಗಾವಣೆಗೆ ಅಲಹಾಬಾದ್ ಹೈಕೋರ್ಟ್ ತಡೆ ನೀಡಿದೆ.
ಫಿರೋಜಾಬಾದ್ನಿಂದ ಗಾಜಿಪುರಕ್ಕೆ ವರ್ಗಾವಣೆಗೊಂಡ ಮನೋಜ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ನ್ಯಾಯಮೂರ್ತಿ ಪಂಕಜ್ ಭಾಟಿಯಾ ಅವರು ಈ ಆದೇಶ ನೀಡಿದ್ದಾರೆ.
2022ರ ಸೆಪ್ಟೆಂಬರ್ 20 ರ ವರ್ಗಾವಣೆ ಆದೇಶವು ಆಡಳಿತಾತ್ಮಕ ಆಧಾರದ ಮೇಲೆ ಮಾಡಲಾಗಿದೆ ಎಂದು ಹೇಳಿದ್ದರೂ, ಪೊಲೀಸ್ ಮೆಸ್ನಲ್ಲಿ ನೀಡಲಾಗುತ್ತಿರುವ ಕಳಪೆ ಆಹಾರದ ವಿರುದ್ಧ ಪ್ರತಿಭಟಿಸಿದ್ದರಿಂದ ಮನೋಜ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು.
ಅರ್ಜಿದಾರರ ವಾದವನ್ನು ಆಲಿಸಿದ ನ್ಯಾಯಾಲಯ, ಈ ವಿಚಾರವನ್ನು ಪರಿಗಣಿಸುವ ಅಗತ್ಯವಿದೆ. ಪ್ರತಿವಾದಿಗಳು ನಾಲ್ಕು ವಾರಗಳಲ್ಲಿ ಅಫಿಡವಿಟ್ ಸಲ್ಲಿಸಲು ಸೂಚಿಸಲಾಗಿದೆ. ಅರ್ಜಿದಾರರು ಮರುಪ್ರಮಾಣ ಪತ್ರ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಬೇಕು ಎಂದಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 28ಕ್ಕೆ ಮುಂದೂಡಿದೆ.
ವಿಚಾರಣೆಯ ಮುಂದಿನ ದಿನಾಂಕದವರೆಗೆ, ಅರ್ಜಿದಾರರು ಈಗಾಗಲೇ ಹೊಸ ಸ್ಥಳದಲ್ಲಿ ಸೇವೆಗೆ ಹಾಜರಾಗದ ಹೊರತು ಸೆಪ್ಟೆಂಬರ್ 20 ರ ವರ್ಗಾವಣೆ ಆದೇಶವನ್ನು ಜಾರಿಗೆ ತರಲಾಗುವುದಿಲ್ಲ ಎಂದು ಅದು ಹೇಳಿದೆ.
Advertisement