ಹಿಮಾಚಲ ಪ್ರದೇಶ: ಸುಖ್ವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಾನೇಕೆ ಹೋಗಬಾರದು?- ಪ್ರತಿಭಾ ವೀರಭದ್ರ ಸಿಂಗ್

ಹಿಮಾಚಲ ಪ್ರದೇಶದ  ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವ ಸುಖ್ವಿಂದರ್ ಸಿಂಗ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ವೀರಭದ್ರ ಸಿಂಗ್ ಅವರನ್ನು ಭೇಟಿಯಾದರು.
ಸುಖ್ವಿಂದರ್ ಸಿಂಗ್, ಪ್ರತಿಭಾ ವೀರಭದ್ರ ಸಿಂಗ್
ಸುಖ್ವಿಂದರ್ ಸಿಂಗ್, ಪ್ರತಿಭಾ ವೀರಭದ್ರ ಸಿಂಗ್
Updated on

ಶಿಮ್ಲಾ: ಹಿಮಾಚಲ ಪ್ರದೇಶದ  ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸುತ್ತಿರುವ ಸುಖ್ವಿಂದರ್ ಸಿಂಗ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ವೀರಭದ್ರ ಸಿಂಗ್ ಅವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಂಗ್, ಪ್ರತಿಭಾ ವೀರಭದ್ರ ಸಿಂಗ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದು, ಅವರ ಕೆಳಗೆ ನಾವೆಲ್ಲ ಕೆಲಸ ನಿರ್ವಹಿಸುತ್ತೇವೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಕೆಯನ್ನು ಆಹ್ವಾನಿಸಲು ಇಲ್ಲಿಗೆ ಬಂದಿರುವುದಾಗಿ ತಿಳಿಸಿದರು.

ನಂತರ ಮಾತನಾಡಿದ ಪ್ರತಿಭಾ ವೀರಭದ್ರ ಸಿಂಗ್, ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನಾನೇಕೆ ಪಾಲ್ಗೊಳ್ಳಬಾರದು? ಎಂದು ಪ್ರಶ್ನಿಸಿದರು. ಖಂಡಿತವಾಗಿಯೂ ನಾನು ಹೋಗುತ್ತೇನೆ. ಸುಖ್ವಿಂದರ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಅಲ್ಲಿಗೆ ಹೋಗುವುದು ನನ್ನ ಕರ್ತವ್ಯವಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com