ಅಮರಾವತಿ ಔಷಧ ವ್ಯಾಪಾರಿ ಹತ್ಯೆ; 11 ಮಂದಿ ವಿರುದ್ಧ ಎನ್ಐಎ ಆರೋಪಪಟ್ಟಿ ಸಲ್ಲಿಕೆ

‌ಅಮರಾವತಿ ಮೂಲದ ಔಷಧ ವ್ಯಾಪಾರಿ ಉಮೇಶ್ ಕೋಲ್ಹೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ 11 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.
ಔಷಧ ವ್ಯಾಪಾರಿ ಉಮೇಶ್ ಕೋಲ್ಹೆ ಹತ್ಯೆ ಪ್ರಕರಣ
ಔಷಧ ವ್ಯಾಪಾರಿ ಉಮೇಶ್ ಕೋಲ್ಹೆ ಹತ್ಯೆ ಪ್ರಕರಣ
Updated on

ಮುಂಬೈ: ‌ಅಮರಾವತಿ ಮೂಲದ ಔಷಧ ವ್ಯಾಪಾರಿ ಉಮೇಶ್ ಕೋಲ್ಹೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ 11 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.

ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಅಮಾನತುಗೊಂಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಬೆಂಬಲಿಸುವ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ನಂತರ ಪೂರ್ವ ಮಹಾರಾಷ್ಟ್ರದ ಅಮರಾವತಿ ನಗರದಲ್ಲಿ 2022ರ ಜೂನ್ 21 ರಂದು ಕೊಲ್ಹೆ ಅವರನ್ನು ಕೊಲೆ ಮಾಡಲಾಗಿತ್ತು.

ಈ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ 11 ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸಿ ಇದೀಗ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ. ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಜುಲೈ 2 ರಂದು ಎನ್‌ಐಎ ಪ್ರಕರಣ ದಾಖಲಿಸಿತ್ತು. 

ನ್ಯಾಯಾಲಯವು ಸೆಪ್ಟೆಂಬರ್‌ನಲ್ಲಿ ಕೇಂದ್ರೀಯ ಸಂಸ್ಥೆಗೆ ಚಾರ್ಜ್‌ಶೀಟ್ ಸಲ್ಲಿಸಲು 90 ದಿನಗಳ ವಿಸ್ತರಣೆಯನ್ನು ನೀಡಿತ್ತು. ಪ್ರವಾದಿ ಮೊಹಮ್ಮದ್ ಅವರ ವಿವಾದಾತ್ಮಕ ಹೇಳಿಕೆಗಳ ಕುರಿತು ಅಮಾನತುಗೊಂಡಿರುವ ಬಿಜೆಪಿ ನಾಯಕ ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ನಂತರ ಕೋಲ್ಹೆಯನ್ನು ಜೂನ್ 21, 2022 ರಂದು ಪೂರ್ವ ಮಹಾರಾಷ್ಟ್ರದ ಅಮರಾವತಿ ನಗರದಲ್ಲಿ ಕೊಲ್ಲಲಾಗಿತ್ತು.

ಭಾರತೀಯ ದಂಡ ಸಂಹಿತೆ 120-ಬಿ (ಕ್ರಿಮಿನಲ್ ಪಿತೂರಿ), 302 (ಕೊಲೆ), 153-ಎ (ಧರ್ಮ, ಜನಾಂಗದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಜುಲೈ 2 ರಂದು ಎನ್‌ಐಎ ಪ್ರಕರಣ ದಾಖಲಿಸಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com