ಮೋದಿ ಸರ್ಕಾರ ಬಂದ ನಂತರ ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ 168ರಷ್ಟು ಇಳಿಕೆ: ಅನುರಾಗ್ ಠಾಕೂರ್

ಪ್ರಧಾನಿ ನರೇಂದ್ರ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 'ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಶೇಕಡಾ 168ರಷ್ಟು ಕಡಿಮೆಯಾಗಿದೆ.
ಅನುರಾಗ್ ಠಾಕೂರ್
ಅನುರಾಗ್ ಠಾಕೂರ್
Updated on

ನವದೆಹಲಿ: ಪ್ರಧಾನಿ ನರೇಂದ್ರ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 'ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಶೇಕಡಾ 168ರಷ್ಟು ಕಡಿಮೆಯಾಗಿದೆ. ಇನ್ನು 2015ರಿಂದ 'ಎಡಪಂಥೀಯ ಉಗ್ರಗಾಮಿ ಚಟುವಟಿಕೆಗಳು ಶೇಕಡಾ 265ರಷ್ಟು ಕಡಿಮೆಯಾಗಿದೆ" ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆಯ ನೀತಿಯನ್ನು ಹೊಂದಿದೆ ಎಂದು ಠಾಕೂರ್ ಹೇಳಿದರು. ಸರ್ಕಾರವು ನಿರ್ಣಾಯಕ ಕ್ರಮವನ್ನು ತೆಗೆದುಕೊಂಡಿತು. ಇದು ಸ್ಪಷ್ಟ ಫಲಿತಾಂಶಗಳನ್ನು ನೀಡಿದೆ. ಉರಿ ದಾಳಿಗೆ ಪ್ರತಿಯಾಗಿ 2016ರಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿತ್ತು ಎಂದು ಠಾಕೂರ್ ತಿಳಿಸಿದರು. 

2019ರಲ್ಲಿ ಬಾಲಾಕೋಟ್ ವೈಮಾನಿಕ ದಾಳಿಯನ್ನು ಪುಲ್ವಾಮಾ ಬಾಂಬ್ ದಾಳಿಗೆ ಪ್ರತಿಕ್ರಿಯೆಯಾಗಿ ನಡೆಸಲಾಯಿತು. ಆದ್ದರಿಂದ ಈ ಎಲ್ಲಾ ನಿರ್ಣಾಯಕ ಕ್ರಮಗಳು ಸ್ಪಷ್ಟ ಫಲಿತಾಂಶಗಳನ್ನು ನೀಡಿವೆ. 2014ರ ನಂತರ ಭಯೋತ್ಪಾದನೆಯಿಂದಾಗಿ ಶೇ.80ರಷ್ಟು ಹಿಂಸಾಚಾರ ಕಡಿಮೆಯಾಗಿದೆ. ನಾಗರಿಕರ ಸಾವು ಶೇ.89ರಷ್ಟು ಕಡಿಮೆಯಾಗಿದೆ ಮತ್ತು 6,000 ಭಯೋತ್ಪಾದಕರು ಶರಣಾಗಿದ್ದಾರೆ ಎಂದರು.

ಭಯೋತ್ಪಾದನೆಗೆ ಹಣಕಾಸು ಒದಗಿಸಿದ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣವು ಶೇಕಡಾ 94ಕ್ಕಿಂತ ಹೆಚ್ಚಿದೆ ಎಂದು ಕೇಂದ್ರ ಸಚಿವರು ಹೇಳಿದರು. 2015ರಿಂದ ಈ ವರ್ಷ ಜೂನ್ 2022ರವರೆಗೆ ಎಡಪಂಥೀಯ ಉಗ್ರವಾದದ ಘಟನೆಗಳಲ್ಲಿ ಶೇಕಡಾ 265ಕ್ಕಿಂತ ಹೆಚ್ಚು ಕಡಿಮೆಯಾಗಿದೆ ಎಂದು ಅವರು ಹೇಳಿದರು. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಈಶಾನ್ಯ ಪ್ರದೇಶದಲ್ಲಿ ಶಾಂತಿಯ ಯುಗ ಆರಂಭವಾಗಿದೆ ಎಂದು ಠಾಕೂರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com