ತೀಸ್ತಾ ಸೆಟಲ್ವಾಡ್
ತೀಸ್ತಾ ಸೆಟಲ್ವಾಡ್

ತೀಸ್ತಾ ಸೆಟಲ್ವಾಡ್, ಶ್ರೀಕುಮಾರ್ ಗೆ 14 ದಿನಗಳ ನ್ಯಾಯಾಂಗ ಬಂಧನ!

2002ರ ಗುಜರಾತ್ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್ ಬಿ ಶ್ರೀಕುಮಾರ್...
Published on

ಅಹಮದಾಬಾದ್: 2002ರ ಗುಜರಾತ್ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿತ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಮತ್ತು ಮಾಜಿ ಪೊಲೀಸ್ ಮಹಾನಿರ್ದೇಶಕ ಆರ್ ಬಿ ಶ್ರೀಕುಮಾರ್ ಅವರನ್ನು ಇಲ್ಲಿನ ನ್ಯಾಯಾಲಯ ಶನಿವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಪೊಲೀಸ್ ಕಸ್ಟಡಿ ಮುಗಿದ ನಂತರ ಇಬ್ಬರನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಸ್ ಪಿ ಪಟೇಲ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಹೆಚ್ಚಿನ ಕಸ್ಟಡಿಗೆ ಮನವಿ ಮಾಡಿಲ್ಲ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪಟೇಲ್ ಹೇಳಿದ್ದಾರೆ.

ಅಹಮದಾಬಾದ್ ಪೊಲೀಸ್ ಅಪರಾಧ ವಿಭಾಗವು ಕಳೆದ ಶನಿವಾರ ದಾಖಲಿಸಿದ ಪ್ರಥಮ ಮಾಹಿತಿ ವರದಿ(ಎಫ್‌ಐಆರ್) ಮೇಲೆ ಸೆಟಲ್ವಾಡ್ ಮತ್ತು ಶ್ರೀಕುಮಾರ್ ಅವರನ್ನು ಬಂಧಿಸಲಾಗಿತ್ತು. 'ತನಿಖಾಧಿಕಾರಿಯು ಯಾವುದೇ ಹೆಚ್ಚಿನ ಕಸ್ಟಡಿಗೆ ಕೇಳಲಿಲ್ಲ. ಆದ್ದರಿಂದ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ' ಎಂದು ಪ್ರಾಸಿಕ್ಯೂಟರ್ ಪಟೇಲ್ ಹೇಳಿದರು.

ಕಳೆದ ಶನಿವಾರ ಶ್ರೀಕುಮಾರ್ ಮತ್ತು ಮರುದಿನ ಸೆಟಲ್ವಾಡ್ ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ ಮುಂಬೈನಲ್ಲಿರುವ ಆಕೆಯ ಮನೆಯಿಂದ ಕರೆದೊಯ್ದ ನಂತರ ಬಂಧಿಸಿತ್ತು. ಬನಸ್ಕಾಂತ ಜಿಲ್ಲೆಯ ಪಾಲನ್‌ಪುರದ ಜೈಲಿನಲ್ಲಿ ಕಸ್ಟಡಿ ಸಾವಿನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ವರ್ಗಾವಣೆ ವಾರಂಟ್ ಮೇಲೆ ಅವರನ್ನು ಅಹಮದಾಬಾದ್‌ಗೆ ಕರೆತರಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

2002ರ ಗೋಧ್ರಾ ನಂತರದ ಗಲಭೆ ಪ್ರಕರಣಗಳಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರಿಗೆ ವಿಶೇಷ ತನಿಖಾ ತಂಡ ನೀಡಿದ್ದ ಕ್ಲೀನ್ ಚಿಟ್ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಕ್ರೈಂ ಬ್ರಾಂಚ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದೆ.

ಗುಜರಾತ್ ಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಬಂಧಿಸುವ ಯತ್ನದಲ್ಲಿ ಶ್ರೀಕುಮಾರ್, ಸೆಟಲ್ವಾಡ್ ಮತ್ತು ಭಟ್ ಅವರು ಸುಳ್ಳು ಸಾಕ್ಷ್ಯಾಧಾರಗಳ ಸೃಷ್ಟಿ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಸೆಟಲ್ವಾಡ್, ಶ್ರೀಕುಮಾರ್ ಮತ್ತು ಭಟ್ ವಿರುದ್ಧ, ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 468, 471(ನಕಲಿ), 194 (ಮರಣದಂಡನೆಯ ಅಪರಾಧವನ್ನು ಪಡೆಯುವ ಉದ್ದೇಶದಿಂದ ಸುಳ್ಳು ಪುರಾವೆಗಳನ್ನು ನೀಡುವುದು ಅಥವಾ ನಿರ್ಮಿಸುವುದು), 211 (ಗಾಯ ಉಂಟುಮಾಡುವ ಕ್ರಿಮಿನಲ್ ಪ್ರಕ್ರಿಯೆಗಳನ್ನು ಸ್ಥಾಪಿಸುವುದು), 218 ( ಸಾರ್ವಜನಿಕ ಸೇವಕ ತಪ್ಪು ದಾಖಲೆಯನ್ನು ರಚಿಸುವುದು ಅಥವಾ ವ್ಯಕ್ತಿಯನ್ನು ಶಿಕ್ಷೆಯಿಂದ ಅಥವಾ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದರಿಂದ ರಕ್ಷಿಸುವ ಉದ್ದೇಶದಿಂದ ಬರೆಯುವುದು) ಮತ್ತು 120 (ಬಿ) (ಅಪರಾಧ ಪಿತೂರಿ).

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com