ಶಿವಸೇನೆ ಪಕ್ಷದ ಚಿಹ್ನೆಗೆ ಸಂಬಂಧಿಸಿದ ಬೇಡಿಕೆ ಪರಿಗಣಿಸುವ ಮುನ್ನ ನಮ್ಮ ವಾದ ಆಲಿಸಿ: ಚುನಾವಣ ಆಯೋಗಕ್ಕೆ ಉದ್ಧವ್ ಬಣ ಮನವಿ

ಶಿವಸೇನೆಯ ಉದ್ಧವ್ ಠಾಕ್ರೆ ಬಣ, ಚುನಾವಣಾ ಆಯೋಗದ ಮೆಟ್ಟಿಲೇರಿದ್ದು, ಶಿವಸೇನೆ ಪಕ್ಷದ ಚಿಹ್ನೆಗೆ ಸಂಬಂಧಿಸಿದ ಬೇಡಿಕೆಯನ್ನು ಪರಿಗಣಿಸುವ ಮುನ್ನ ನಮ್ಮನ್ನೂ ಆಲಿಸಿ ಎಂದು ಮನವಿ ಮಾಡಿದೆ. 
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ
Updated on

ನವದೆಹಲಿ: ಶಿವಸೇನೆಯ ಉದ್ಧವ್ ಠಾಕ್ರೆ ಬಣ, ಚುನಾವಣಾ ಆಯೋಗದ ಮೆಟ್ಟಿಲೇರಿದ್ದು, ಶಿವಸೇನೆ ಪಕ್ಷದ ಚಿಹ್ನೆಗೆ ಸಂಬಂಧಿಸಿದ ಬೇಡಿಕೆಯನ್ನು ಪರಿಗಣಿಸುವ ಮುನ್ನ ನಮ್ಮನ್ನೂ ಆಲಿಸಿ ಎಂದು ಮನವಿ ಮಾಡಿದೆ. 

ಶಿವಸೇನೆಯ ಏಕನಾಥ್ ಶಿಂಧೆ ಬಣದ ಯಾವುದೇ ಬೇಡಿಕೆಯನ್ನು ಪರಿಗಣಿಸುವ ಮುನ್ನ ನಮ್ಮನ್ನೂ ಆಲಿಸಬೇಕೆಂಬುದು ಉದ್ಧವ್ ಠಾಕ್ರೆ ಬಣದ ಮನವಿಯಾಗಿದೆ. 

ಶಿವಸೇನೆಯ ನಾಯಕ ಅನಿಲ್ ದೇಸಾಯಿ, ಈ ಮನವಿ ಮಾಡಿದ್ದು, ಇದೊಂದು ಮುನ್ನೆಚ್ಚರಿಕಾ ಕ್ರಮವಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಶಿವಸೇನೆಯ ನಾಯಕ ಏಕನಾಥ್ ಶಿಂಧೆ ಕಳೆದ ತಿಂಗಳು ಎಂವಿಎ ಸರ್ಕಾರದಿಂದ ಬಂಡೆದ್ದು 40 ಶಾಸಕರೊಂದಿಗೆ ಬಿಜೆಪಿ ಜೊತೆ ಸೇರಿ ಮೈತ್ರಿ ಸರ್ಕಾರ ರಚಿಸಿದ್ದರು. 

ಏಕನಾಥ್ ಶಿಂಧೆ ಅವರ ಸರ್ಕಾರಕ್ಕೆ 10 ಪಕ್ಷೇತರ ಶಾಸಕರು ಬೆಂಬಲ ನೀಡಿದ್ದಾರೆ. ಜೂ.30 ರಂದು ಬಿಜೆಪಿ-ಏಕನಾಥ್ ಶಿಂಧೆ ಬಣದ ಶಾಸಕರ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿಂಧೆ ತಮ್ಮದೇ ಮೂಲ ಶಿವಸೇನೆ ಎಂಬ ಹಕ್ಕನ್ನು ಮಂಡಿಸಿದ್ದು, ಮೂರನೇ ಎರಡರಷ್ಟು ಶಾಸಕರ ಬೆಂಬಲ ತಮಗೇ ಇದೆ ಎಂದು ಹೇಳಿದ್ದರು. 

ಶಿವಸೇನೆ ಸಂಸದೀಯ ಪಕ್ಷದಲ್ಲೂ ಇಬ್ಭಾಗವಾಗುವ ಲಕ್ಷಣಗಳು ಗೋಚರಿಸುತ್ತಿದ್ದು ಕನಿಷ್ಠ 14 ಮಂದಿ ಲೋಕಸಭಾ ಸದಸ್ಯರು ಶಿಂಧೆ ನೇತೃತ್ವದ ಬಣಕ್ಕೆ ಬೆಂಬಲ ವ್ಯಕ್ತಪಡಿಸಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com