ಮೊಹಮ್ಮದ್ ಜುಬೈರ್
ಮೊಹಮ್ಮದ್ ಜುಬೈರ್

ಫ್ಯಾಕ್ಟ್ ಚೆಕ್ ಪ್ರಕರಣ: ಮೊಹಮ್ಮದ್ ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿದ ಉತ್ತರಪ್ರದೇಶ ಕೋರ್ಟ್!

2021ರ ಸತ್ಯ ಶೋಧ ಟ್ವೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಜಾಮೀನು ಅರ್ಜಿಯನ್ನು ಲಖಿಂಪುರ ಖೇರಿಯ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. 
Published on

ಲಖನೌ: 2021ರ ಸತ್ಯ ಶೋಧ ಟ್ವೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಜಾಮೀನು ಅರ್ಜಿಯನ್ನು ಲಖಿಂಪುರ ಖೇರಿಯ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ.

ಸಮುದಾಯಗಳ ನಡುವೆ ದ್ವೇಷವನ್ನು ಬಿತ್ತುವುದು. ತನ್ನ ಟ್ವೀಟ್ ಮೂಲಕ ಸ್ಥಳೀಯ ಚಾನೆಲ್ ಅನ್ನು ದೂಷಿಸಿದ ಕಾರಣಕ್ಕಾಗಿ ಮೊಹಮ್ಮದಿ ಪೊಲೀಸ್ ಠಾಣೆಯಲ್ಲಿ ಪತ್ರಕರ್ತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸೋಮವಾರ ಲಖಿಂಪುರ ಖೇರಿ ನ್ಯಾಯಾಲಯವು ಜುಬೈರ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

2021ರ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ ಪತ್ರಕರ್ತ ಆಶಿಶ್ ಕುಮಾರ್ ಕಟಿಯಾರ್ ನೀಡಿದ ದೂರಿನ ಆಧಾರದ ಮೇಲೆ ಕಳೆದ ಸೆಪ್ಟೆಂಬರ್ 18ರಂದು ಐಪಿಸಿ ಸೆಕ್ಷನ್ 153(ಎ)(ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿ  ಜುಬೈರ್ ವಿರುದ್ಧ ವಾರಂಟ್ ಹೊರಡಿಸಲಾಗಿದೆ.

ದೆಹಲಿ ನ್ಯಾಯಾಲಯವು ಆಕ್ಷೇಪಾರ್ಹ ಟ್ವೀಟ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಅವರಿಗೆ ಜಾಮೀನು ನೀಡಿತ್ತು. ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಭಿನ್ನಾಭಿಪ್ರಾಯದ ಧ್ವನಿ ಅಗತ್ಯ ಎಂದು ಅಭಿಪ್ರಾಯಪಟ್ಟಿತ್ತು.

ಏತನ್ಮಧ್ಯೆ, ಮತ್ತೊಂದು ಬೆಳವಣಿಗೆಯಲ್ಲಿ, ಹತ್ರಾಸ್ ಪೊಲೀಸರು ಜುಬೈರ್‌ನನ್ನು ಕಸ್ಟಡಿಗೆ ಕೋರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com