ಸ್ವಾತಂತ್ರ್ಯ ಹೋರಾಟಗಾರರಿಗೆ ಡಿಜಿಟಲ್ ಗೌರವ ಸಲ್ಲಿಸಲು ಜನತೆಗೆ ಪ್ರಧಾನಿ ಮೋದಿ ಕರೆ

ಸ್ವಾತಂತ್ರ್ಯ ಹೋರಾಟಗಾರರಿಗೆ ಡಿಜಿಟಲ್ ಗೌರವ ಸಲ್ಲಿಸುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಜು.23 ರಂದು ಕರೆ ನೀಡಿದ್ದಾರೆ. 
ಡಿಜಿಟಲ್ ಜ್ಯೋತಿ
ಡಿಜಿಟಲ್ ಜ್ಯೋತಿ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರರಿಗೆ ಡಿಜಿಟಲ್ ಗೌರವ ಸಲ್ಲಿಸುವಂತೆ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಜು.23 ರಂದು ಕರೆ ನೀಡಿದ್ದಾರೆ. 
 
ನವದೆಹಲಿಯ ಸೆಂಟ್ರಲ್ ಪಾರ್ಕ್ ನಲ್ಲಿ ಅಳವಡಿಸಲಾಗಿರುವ ಡಿಜಿಟಲ್ ಜ್ಯೋತ್ ಹೆಚ್ಚು ಪ್ರಜ್ವಲಿಸಲು, ಆನ್ ಲೈನ್ ಮೂಲಕ ಸಲ್ಲಿಸುವ ಪ್ರತಿಯೊಂದು ಗೌರವವೂ ಮುಖ್ಯವಾಗಲಿದೆ.
 
ಸೆಂಟ್ರಲ್ ಪಾರ್ಕ್ ದೆಹಲಿಯಲ್ಲಿ ಸ್ಕೈ ಬೀಮ್ ದೀಪವನ್ನು ಅಳವಡಿಸಲಾಗಿದ್ದು, ಪ್ರತಿ ಬಾರಿ ವ್ಯಕ್ತಿಗಳು ಆನ್ ಲೈನ್ ಮೂಲಕ ಗೌರವ ಸಲ್ಲಿಸಿದಾಗಲೂ ಈ ಡಿಜಿಟಲ್ ಜ್ಯೋತ್ ನ ಪ್ರಕಾಶ ಹೆಚ್ಚಾಗಲಿದೆ. ಆದ ಕಾರಣ ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಸ್ವಾತಂತ್ರ್ಯೊತ್ಸವದ ಅಮೃತ ಮಹೋತ್ಸವವನ್ನು ಬಲಪಡಿಸಿ ಎಂದು ಪ್ರಧಾನಿ ಟ್ವೀಟ್ ಮೂಲಕ ಕರೆ ನೀಡಿದ್ದಾರೆ.
 
ಡಿಜಿಟಲ್ ಜ್ಯೋತಿ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಹಿರೋಗಳನ್ನು ನೆನಪಿನಲ್ಲಿಡಲು ಸಲ್ಲಿಸಲಾಗುತ್ತಿರುವ ವಿಶೇಷವಾದ ಗೌರವವಾಗಿದೆ. digitaltribute.in ಮೂಲಕ ಜನತೆ ಇದರಲ್ಲಿ ಭಾಗವಹಿಸಬಹುದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com