ಉತ್ತರ ಪ್ರದೇಶದ ಬಾರಬಂಕಿ ಬಳಿ ಭೀಕರ ಅಪಘಾತ: 8 ಮಂದಿ ಸಾವು, 16 ಮಂದಿಗೆ ಗಾಯ, ಸಿಎಂ ಸಂತಾಪ

ಉತ್ತರ ಪ್ರದೇಶದ ಬಾರಾಬಂಕಿಯ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ದೆಹಲಿಗೆ ಹೋಗುವ ಡಬಲ್ ಡೆಕ್ಕರ್ ಬಸ್ ನಿಂತಿದ್ದ ಮತ್ತೊಂದು ಡಬಲ್ ಡೆಕ್ಕರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಮೃತಪಟ್ಟು 16 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಅಪಘಾತಕ್ಕೆ ಬಸ್ಸು ನಜ್ಜುಗುಜ್ಜಾಗಿರುವುದು
ಅಪಘಾತಕ್ಕೆ ಬಸ್ಸು ನಜ್ಜುಗುಜ್ಜಾಗಿರುವುದು
Updated on

ಬಾರಬಂಕಿ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಬಾರಾಬಂಕಿಯ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ದೆಹಲಿಗೆ ಹೋಗುವ ಡಬಲ್ ಡೆಕ್ಕರ್ ಬಸ್ ನಿಂತಿದ್ದ ಮತ್ತೊಂದು ಡಬಲ್ ಡೆಕ್ಕರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಮೃತಪಟ್ಟು 16 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಬಾರಾಬಂಕಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಮನೋಜ್ ಪಾಂಡೆ, ಬಿಹಾರದ ಸೀತಾಮರ್ಹಿಯಿಂದ ಬರುತ್ತಿದ್ದ ಬಸ್ ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ಹಿಂದಿನಿಂದ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಲಕ್ನೋದ ಟ್ರಾಮಾ ಸೆಂಟರ್‌ಗೆ ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಸ್ತೆ ಅಪಘಾತದಲ್ಲಿ ಜೀವಹಾನಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com