ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಿಂಗಾಪುರ ಭೇಟಿ ರದ್ದು

ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ. ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on

ನವದೆಹಲಿ:  ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಸಿಂಗಾಪುರ ಭೇಟಿ ರದ್ದುಗೊಂಡಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಿಂಗಾಪುರ್ ಭೇಟಿಗೆ ಅನುಮತಿಗಾಗಿ ಕೇಂದ್ರ ಸರ್ಕಾರದ ನಡುವೆ ಹಗ್ಗಜಗ್ಗಾಟ ನಡೆದಿತ್ತು.

ಕೇಜ್ರಿವಾಲ್ ಅವರ ವಿದೇಶ ಪ್ರವಾಸ ರದ್ಧತಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ದೆಹಲಿ ಸರ್ಕಾರ ಔಪಚಾರಿಕ ಹೇಳಿಕೆ ನೀಡಿದೆ. ಆಗಸ್ಟ್ ಮೊದಲ ವಾರದಲ್ಲಿ ಸಿಂಗಾಪುರದಲ್ಲಿ ನಡೆಯಲಿರುವ ವಿಶ್ವ ನಗರಗಳ ಶೃಂಗಸಭೆಯಲ್ಲಿ ಭಾಗವಹಿಸಲು ಕೇಜ್ರಿವಾಲ್ ಅವರನ್ನು ಆಹ್ವಾನಿಸಲಾಗಿತ್ತು.

ಜುಲೈ 20 ರೊಳಗೆ ಸಿಂಗಾಪುರ್ ಭೇಟಿಯ ಔಪಚಾರಿಕ ಕಾರ್ಯಗಳು ಪೂರ್ಣಗೊಂಡಿದ್ದು, ಜುಲೈ 21 ರಂದು ಲೆಫ್ಟಿನೆಂಟ್ ಗವರ್ನರ್ ಕಡತವನ್ನು ಹಿಂದಿರುಗಿಸಿದ್ದಾರೆ. ಎಲ್‌ಜಿ ಮತ್ತು ಕೇಂದ್ರದಿಂದ ಅಗತ್ಯ ಅನುಮತಿ ಪಡೆಯಲು ಬಹಳ ಸಮಯ ತೆಗೆದುಕೊಂಡಿದ್ದರಿಂದ, ಉಳಿದ ಔಪಚಾರಿಕತೆಗಳನ್ನು ಪೂರ್ಣಗೊಳಿಸಲು ಸಮಯ ಆಗಿಲ್ಲ ಎಂದು ಎಎಪಿ ಹೇಳಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com