ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯ, ತೀರ್ಪು ಕಾಯ್ದಿರಿಸಿದ ಸಿಬಿಐ ಕೋರ್ಟ್

ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ)ದಿಂದ ಬಂಧಿತರಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರ ಪೂರ್ಣಗೊಳಿಸಿದ...
ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್
ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್
Updated on

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ)ದಿಂದ ಬಂಧಿತರಾಗಿರುವ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮಂಗಳವಾರ ಪೂರ್ಣಗೊಳಿಸಿದ ಸಿಬಿಐ ವಿಶೇಷ ಕೋರ್ಟ್, ತೀರ್ಪುನ್ನು ಕಾಯ್ದಿರಿಸಿದೆ.

ಜಾಮೀನು ಕೋರಿ ಸತ್ಯೇಂದ್ರ ಜೈನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು, ವಾದ-ಪ್ರದಿವಾದ ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿದ್ದಾರೆ.

ಐಪಿಸಿ ಸೆಕ್ಷನ್ 109 ಮತ್ತು ಸೆಕ್ಷನ್ 13(2)ರ ಅಡಿ ಸತ್ಯೇಂದ್ರ ಜೈನ್ ಮತ್ತು ಇತರರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿದೆ.

ಕೋಲ್ಕತ್ತಾ ಮೂಲದ ಕಂಪನಿಯೊಂದಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಈ ವರ್ಷ ಏಪ್ರಿಲ್‌ನಲ್ಲಿ 4.81 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಂಡ ನಂತರ ಇಡಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದೆ. ತನಿಖಾ ಸಂಸ್ಥೆಯು ಎಎಪಿ ನಾಯಕನ ವಿರುದ್ಧ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ. ಜೈನ್ ಅವರು ಷೇರುದಾರರಾಗಿದ್ದ ನಾಲ್ಕು ಕಂಪನಿಗಳಿಂದ ಪಡೆದ ಹಣದ ಮೂಲವನ್ನು ವಿವರಿಸಿಲ್ಲ ಎಂದು ಇಡಿ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com